ಕೈವಾರ ಗುರುಪೂಜಾ-ಸಂಗೀತೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ
ಕೈವಾರ ಗುರುಪೂಜಾ-ಸಂಗೀತೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ
ಚಿಕ್ಕಬಳ್ಳಾಪುರ ಜಿಲ್ಲೆ, ಚಿಂತಾಮಣಿ ತಾಲ್ಲೂಕಿನ ಕೈವಾರ ಗುರುಪೂಜಾ ಸಂಗೀತೋತ್ಸವ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಡಾ. ಎಂ.ಆರ್.ಜಯರಾಮ್ ಬಿಡುಗಡೆ ಮಾಡಿದರು.


ಕೋಲಾರ, 0೮ ಜೂನ್ (ಹಿ.ಸ) :

ಆ್ಯಂಕರ್ : ಚಿಕ್ಕಬಳ್ಳಾಪುರ ಜಿಲ್ಲೆ, ಚಿಂತಾಮಣಿ ತಾಲ್ಲೂಕಿನ ಪ್ರಸಿದ್ದ ಯಾತ್ರಾಸ್ಥಳ ಕೈವಾರ ಕ್ಷೇತ್ರದ ಸದ್ಗುರು ಶ್ರೀ ಯೋಗಿನಾರೇಯಣ ಮಠದಲ್ಲಿ ಜುಲೈ ೮ ರಿಂದ ೧೦ ರವರೆಗೆ ನಡೆಯುವ ರಾಷ್ಟ್ರಮಟ್ಟದ ಸಂಗೀತೋತ್ಸವ ಮತ್ತು ಗುರುಪೂಜಾ ಮಹೋತ್ಸವದ ಆಹ್ವಾನಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಸದ್ಗುರು ಶ್ರೀ ಯೋಗಿ ನಾರೇಯಣ ತಾತಯ್ಯನವರ ಸನ್ನಿಧಿಯಲ್ಲಿ ಧರ್ಮಾಧಿಕಾರಿಗಳಾದ ಡಾ.ಎಂ.ಆರ್.ಜಯರಾಮ್ ರವರು ವಿಶೇಷ ಪೂಜೆಯನ್ನು ಸಮರ್ಪಿಸುವುದರ ಮೂಲಕ ಗುರುಪೂಜಾ ಸಂಗೀತೋತ್ಸವದ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಿ, ಭಕ್ತರಿಗೆ ಹಂಚಿದರು.

ಡಾ.ಎಂ.ಆರ್.ಜಯರಾಮ್ ರವರು ಮಾತನಾಡುತ್ತಾ ಗುರುಗಳ ಪೂಜೆ ಮತ್ತು ಸಂಗೀತೋತ್ಸವವನ್ನು ಗುರುಪೂರ್ಣಿಮೆಯ ವಿಶೇಷವಾಗಿ ೩ ದಿನಗಳು ನಿರಂತರ ೭೨ ಗಂಟೆಗಳ ಕಾಲ ಶ್ರೀಕ್ಷೇತ್ರದಲ್ಲಿ ನಡೆಯುತ್ತದೆ. ಸಂಗೀತ ವಿದ್ವಾಂಸರುಗಳು ಸಂಕೀರ್ತನೆಯನ್ನು ಶ್ರದ್ದಾಭಕ್ತಿಗಳಿಂದ ಗುರುಗಳಿಗೆ ಸಮರ್ಪಿಸಲಿದ್ದಾರೆ ಎಂದರು.

ಕೈವಾರದ ಸಂಗೀತೋತ್ಸವವು ಸಂಗೀತ ಕ್ಷೇತ್ರದಲ್ಲಿ ಮಹತ್ವವನ್ನು ಪಡೆದುಕೊಂಡಿದೆ. ಗುರುಪೂಜಾ - ಸಂಗೀತ ಮಹೋತ್ಸವಗಳು ಸುಮಾರು ವರ್ಷಗಳಿಂದಲೂ ಕೈವಾರದಲ್ಲಿ ವಿಜೃಂಭಣೆಯಿ0ದ ನಡೆದುಕೊಂಡು ಬರುತ್ತಿದೆ. ದೇಶದ ವಿವಿಧ ಸಂಗೀತ ವಿದ್ವಾಂಸರುಗಳು ಇಲ್ಲಿ ಬಂದು ಸೇವೆ ಸಲ್ಲಿಸುತ್ತಾರೆ. ಸಂಗೀತ ರಸದೌತಣವನ್ನು ಸವಿಯಲು ಸಂಗೀತ ಪ್ರಿಯರು ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಾರೆ ಎಂದರು.

ಶ್ರೀ ಯೋಗಿ ನಾರೇಯಣ ಸಂಕೀರ್ತನಾ ಯೋಜನೆಯ ಸಂಚಾಲಕರಾದ ವಾನರಾಶಿ ಬಾಲಕೃಷ್ಣ ಭಾಗವತರ್ ರವರು ಮಾತನಾಡುತ್ತಾ ಜುಲೈ ೮ ಮಂಗಳವಾರ ಬೆಳಿಗ್ಗೆ ೬ ಗಂಟೆಗೆ ಗುರುಪೂಜೆ-ಸಂಗೀತೋತ್ಸವ ಆರಂಭವಾಗುತ್ತದೆ. ನಾಡಿನ ಪ್ರಸಿದ್ದ ವಿದ್ವಾಂಸರುಗಳು, ನಾದಸ್ವರ ವಾದಕರು, ಸಂಗೀತಗಾರು ಹಾಗೂ ಕಲೆಯ ನಾನಾ ಪ್ರಕಾರದ ಎಲ್ಲಾ ಕಲಾವಿದರನ್ನು ಒಂದೇ ವೇದಿಕೆಯಲ್ಲಿ ಕಾಣುವ ಅವಕಾಶ ಒದಗಿಬಂದಿದೆ. ಇಂತಹ ಕಾರ್ಯಕ್ರಮಗಳನ್ನು ಸಂಗೀತ ಕಲಾಭಿಮಾನಿಗಳು ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಪ್ರಾತ:ಕಾಲದಲ್ಲಿ ಘಂಟಾನಾದ, ಸುಪ್ರಭಾತ, ಗೋಪೂಜೆಯನ್ನು ನೆರವೇರಿಸಲಾಯಿತು. ಆಹ್ವಾನಪತ್ರಿಕೆ ಬಿಡುಗಡೆ ಸಂದರ್ಭದಲ್ಲಿ ಮಠದ ಟ್ರಸ್ಟ್ನ ಖಜಾಂಚಿಗಳಾದ ಆರ್.ಪಿ.ಎಂ.ಸತ್ಯನಾರಾಯಣ್, ಶ್ರೀ ಯೋಗಿ ನಾರೇಯಣ ಸಂಕೀರ್ತನಾ ಯೋಜನೆಯ ಸಂಚಾಲಕರಾದ ವಾನರಾಶಿ ಬಾಲಕೃಷ್ಣ ಭಾಗವತರ್, ಸದಸ್ಯರಾದ ಬಾಗೇಪಲ್ಲಿ ಕೆ.ನರಸಿಂಹಪ್ಪ, ಗಣೇಶ್ ಚಂದ್ರಪ್ಪ ಆಡಳಿತಾಧಿಕಾರಿ ಕೆ.ಲಕ್ಷಿ÷್ಮನಾರಾಯಣ್ ಮುಂತಾದವರು ಉಪಸ್ಥಿತರಿದ್ದರು.

ಚಿತ್ರ : ಚಿಕ್ಕಬಳ್ಳಾಪುರ ಜಿಲ್ಲೆ, ಚಿಂತಾಮಣಿ ತಾಲ್ಲೂಕಿನ ಕೈವಾರ ಗುರುಪೂಜಾ ಸಂಗೀತೋತ್ಸವ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಡಾ. ಎಂ.ಆರ್.ಜಯರಾಮ್ ಬಿಡುಗಡೆ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande