ಬೆಂಗಳೂರು, 08 ಜೂನ್ (ಹಿ.ಸ.) :
ಆ್ಯಂಕರ್ : ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿದೆ. ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಮುಂದಿನ ತನಿಖೆಯನ್ನು ಎನ್ಐಎ ಅಧಿಕಾರಿಗಳು ನಡೆಸಲಿದ್ದಾರೆ.
ಕಳೆದ ಮೇ 1ರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ಸುಹಾಸ್ ಶೆಟ್ಟಿ ಅವರನ್ನು ಕಿನ್ನಿಪದವು ಜಂಕ್ಷನ್ ಬಳಿ 6 ಮಂದಿಯ ತಂಡವೊಂದು ಬೆನ್ನಟ್ಟಿ ಬರ್ಬರವಾಗಿ ಹತ್ಯೆ ಮಾಡಿತ್ತು. ಈ ಕುರಿತು ತನಿಖೆ ಕೈಗೊಂಡಿದಗದ ಮಂಗಳೂರುಬ ಪೊಲೀಸರು 11 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶಗಳಿಂದ ಹಣಕಾಸಿನ ನೆರವು ಸಿಕ್ಕಿದೆ. ರಾಜ್ಯದ ಪೊಲೀಸ್ ಇಲಾಖೆಯು ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಎನ್ಐಎಗೆ ಒಪ್ಪಿಸಬೇಕೆಂದು ಆಗ್ರಹಿಸಿ ಬಿಜೆಪಿ ನಾಯಕರು ಸೇರಿದಂತೆ ಹಿಂದೂಪರ ಕಾರ್ಯರ್ತರು ಆಗ್ರಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa