ಬೆಂಗಳೂರು, 08 ಜೂನ್ (ಹಿ.ಸ.) :
ಆ್ಯಂಕರ್ : ಚಿನ್ನಾಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಕುಟುಂಬಳಿಗೆ ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಒಂದು ತಿಂಗಳ ಸಂಬಳ ನೀಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ರಾಜ್ಯ ಸರ್ಕಾರ ಪರಿಹಾರ ಕೊಡುವುದರಲ್ಲಿ ಮೀನಮೇಷ ಎಣಿಸಿದೆ ಎಂದು ವಾಗ್ದಾಳಿ ನಡೆಸಿದರು.
ಇದು ಸರ್ಕಾರಿ ಕಾರ್ಯಕ್ರಮ ಅಂತ ಅವರೇ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕಾರ್ಯಕ್ರಮಕ್ಕೆ ಆಮಂತ್ರಣ ಇರಲಿ, ನನಗೆ ಒಂದು ಕರೆ ಕೂಡ ಮಾಡಲಿಲ್ಲ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa