ಕಾಲ್ತುಳಿತದಿಂದ ಮೃತಪಟ್ಟ ಸಹನಾ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ
ಆರ್.ಸಿ.ಬಿ. ವಿಜಯೋತ್ಸವದಲ್ಲಿ ಕಾಲ್ತುಳಿತದಿಂದ ಮೃತಪಟ್ಟ ಸಹನಾ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ
ಆರ್.ಸಿ.ಬಿ. ಕ್ರಿಕೆಟ್ ವಿಜಯೋತ್ಸವ ಸಂದರ್ಭದಲ್ಲಿ ಕಾಲ್ತುಳಿದಿಂದ ಮೃತಪಟ್ಟ ಕೋಲಾರದ ಸಹನ ಪೋಷಕರಿಗೆ ಸರ್ಕಾರದ ಪರವಾಗಿ ಜಿಲ್ಲಾಧಿಕಾರಿ ಎಂ.ಆರ್.ರವಿ ೨೫ ಸಾವಿರ ರೂಪಾಯಿ ಚೆಕ್ ವಿತರಿಸಿದರು.


ಕೋಲಾರ, ೦೮ ಜೂನ್ (ಹಿ.ಸ) :

ಆ್ಯಂಕರ್ : ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರ್.ಸಿ.ಬಿ. ವಿಜಯೋತ್ಸವ ವೇಳೆಯಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ ಕೋಲಾರದ ಯುವತಿ ಸಹನಾ ರವರ ಪೋಷಕರಿಗೆ ಸರ್ಕಾರದ ವತಿಯಿಂದ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಅವರು ರೂ. ೨೫.೦೦ ಲಕ್ಷಗಳ ಮೊತ್ತದ ಪರಿಹಾರ ಚೆಕ್ ವಿತರಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಅಪರ ಪೊಲೀಸ್ ವರಿಷ್ಟಾಧಿಕಾರಿ ರವಿಶಂಕರ್, ಅಪರ ಜಿಲ್ಲಾಧಿಕಾರಿ ಮಂಗಳ, ಕೋಲಾರ ತಹಸೀಲ್ದಾರ್ ಡಾ. ನಯನ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಮೃತ ಸಹನ ಇಂಜಿನಯರಿAಗ್ ಪದವೀಧರರಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸ್ನೇಹಿತರೊಂದಿಗೆ ವಿಜಯೋತ್ಸವದಲ್ಲಿ ಪಾಲ್ಗೊಳ್ಳಲು ಹೋದಾಗ ಕಾಲ್ತುಳಿತದಲ್ಲಿ ಉಸಿರುಗಟ್ಟಿ ಮೃತಪಟ್ಟರು.

ಚಿತ್ರ ; ಆರ್.ಸಿ.ಬಿ. ಕ್ರಿಕೆಟ್ ವಿಜಯೋತ್ಸವ ಸಂದರ್ಭದಲ್ಲಿ ಕಾಲ್ತುಳಿದಿಂದ ಮೃತಪಟ್ಟ ಕೋಲಾರದ ಸಹನ ಪೋಷಕರಿಗೆ ಸರ್ಕಾರದ ಪರವಾಗಿ ಜಿಲ್ಲಾಧಿಕಾರಿ ಎಂ.ಆರ್.ರವಿ ೨೫ ಲಕ್ಷ ರೂಪಾಯಿ ಚೆಕ್ ವಿತರಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande