ರಾಜ್ಯ ಸರಕಾರ ಹಳಿ ತಪ್ಪಿದೆ : ಕೇಂದ್ರ ಸಚಿವ ಸೋಮಣ್ಣ
ಮೈಸೂರು, 08 ಜೂನ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನ ರೈಲ್ವೆ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮೊದಲಿನಂತಿಲ್ಲ, ಅವರ ನಡವಳಿಕೆ ಸಂಪೂರ್ಣ ಬದಲಾಗಿದ
ರಾಜ್ಯ ಸರಕಾರ ಹಳಿ ತಪ್ಪಿದೆ : ಕೇಂದ್ರ ಸಚಿವ ಸೋಮಣ್ಣ


ಮೈಸೂರು, 08 ಜೂನ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನ ರೈಲ್ವೆ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮೊದಲಿನಂತಿಲ್ಲ, ಅವರ ನಡವಳಿಕೆ ಸಂಪೂರ್ಣ ಬದಲಾಗಿದೆ ಎಂದು ಟೀಕಿಸಿದರು.

ಸರ್ಕಾರ ಹಳಿ ತಪ್ಪಿದ್ದು, ಪೊಲೀಸ್ ಅಧಿಕಾರಿಗಳ ಅಮಾನತಿನಿಂದ ಪೊಲೀಸ್ ಇಲಾಖೆಯ ನೈತಿಕತೆ ಕುಗ್ಗಿದೆ ಎಂದು ಆರೋಪಿಸಿದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಗ್ಧ ಜೀವಗಳ ಸಾವಿಗೆ ಸರ್ಕಾರವೇ ಜವಾಬ್ದಾರಿ. ಈ ಪಾಪಕ್ಕೆ ಬೆಲೆ ತೆರಬೇಕು, ಇಲ್ಲದಿದ್ದರೆ ಜನರು ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande