ಹುಬ್ಬಳ್ಳಿ, 08 ಜೂನ್ (ಹಿ.ಸ.) :
ಆ್ಯಂಕರ್ : ನೈಋತ್ಯ ರೈಲ್ವೆ ಸ್ಪೋರ್ಟ್ಸ್ ಅಸೋಸಿಯೇಷನ್ ಫಿಟ್ ಇಂಡಿಯಾ ಅಭಿಯಾನದ ಅಂಗವಾಗಿ “ಸೈಕಲ್ ಮೇಲೆ ಭಾನುವಾರ” ಸೈಕ್ಲಾಥಾನ್ ಕಾರ್ಯಕ್ರಮವನ್ನು ಹುಬ್ಬಳ್ಳಿಯ ರೇಲ್ವೆ ಗಾಲ್ಫ್ ಲಿಂಕ್ ಮೈದಾನದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಏಷ್ಯನ್ ಗೇಮ್ಸ್ ಹಾಗೂ ಕಾಮನ್ವೆಲ್ತ್ ಗೇಮ್ಸ್ ಪದಕ ವಿಜೇತ ಕ್ರೀಡಾಪಟುಗಳು, ರೈಲ್ವೆಯ ನಾನಾ ವಿಭಾಗದ ಕ್ರೀಡಾಪಟುಗಳು ಮತ್ತು 50 ಕ್ಕೂ ಹೆಚ್ಚು ಅಧಿಕಾರಿಗಳು ಭಾಗವಹಿಸಿದರು.
ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಕ್ರೀಡಾಪಟುಗಳ ಸಾಧನೆಗಳನ್ನು ಶ್ಲಾಘಿಸಿದರು. ದೈಹಿಕ ಆರೋಗ್ಯದ ಮಹತ್ವವನ್ನು ಅವರು ಪ್ರಸ್ತಾಪಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa