ಇಂಫಾಲ್, 08 ಜೂನ್ (ಹಿ.ಸ.) :
ಆ್ಯಂಕರ್ : ಮೈಥಿ ಸಮುದಾಯದ ಐದು ಅರಾಂಬೈ ಟೆಂಗೋಲ್ ಸ್ವಯಂಸೇವಕರ ಬಂಧನದ ನಂತರ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದ್ದು, ರಾಜಧಾನಿ ಇಂಫಾಲ್ ಸೇರಿ ಐದು ಜಿಲ್ಲೆಗಳಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ.
ಈ ಹಿನ್ನೆಲೆಯಲ್ಲಿ ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ತೌಬಲ್, ವಿಷ್ಣುಪುರ ಮತ್ತು ಕಾಕ್ಟಿಂಗ್ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದ ಐದು ದಿನಗಳವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಪರಿಸ್ಥಿತಿಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕ ಸಮಾವೇಶಗಳಿಗೂ ನಿರ್ಬಂಧ ಹೇರಲಾಗಿದೆ. ವದಂತಿಗಳನ್ನು ಹರಡುವುದನ್ನು ತಡೆಯುವ ಮತ್ತು ಸಾರ್ವಜನಿಕ ಶಾಂತಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa