ಸಮಗ್ರ ಶಿಕ್ಷಣ ಯೋಜನೆಯಡಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಅಹ್ವಾನ
ಹೊಸಪೇಟೆ, 09 ಜೂನ್ (ಹಿ.ಸ.) : ಆ್ಯಂಕರ್ : 2025-26ನೇ ಶೈಕ್ಷಣಿಕ ಸಾಲಿಗೆ ತಾಲೂಕುಗಳಲ್ಲಿ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗ ತಲಾ 02 ರಂತೆ ವಿಶೇಷ ಸಂಪನ್ಮೂಲ ಶಿಕ್ಷಕರ (ಬಿಐಆರ್‍ಟಿ) ಒಟ್ಟು 20 ಹುದ್ದೆಗಳಿಗೆ ಅರ್ಹ ಶಿಕ್ಷಕರನ್ನು ನೇಮಿಸಿಕೊಳ್ಳಲು ನೇರಗುತ್ತಿಗೆಯಡಿ ತಾತ್ಕಾಲಿಕವಾಗಿ
ಸಮಗ್ರ ಶಿಕ್ಷಣ ಯೋಜನೆಯಡಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಅಹ್ವಾನ


ಹೊಸಪೇಟೆ, 09 ಜೂನ್ (ಹಿ.ಸ.) :

ಆ್ಯಂಕರ್ : 2025-26ನೇ ಶೈಕ್ಷಣಿಕ ಸಾಲಿಗೆ ತಾಲೂಕುಗಳಲ್ಲಿ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗ ತಲಾ 02 ರಂತೆ ವಿಶೇಷ ಸಂಪನ್ಮೂಲ ಶಿಕ್ಷಕರ (ಬಿಐಆರ್‍ಟಿ) ಒಟ್ಟು 20 ಹುದ್ದೆಗಳಿಗೆ ಅರ್ಹ ಶಿಕ್ಷಕರನ್ನು ನೇಮಿಸಿಕೊಳ್ಳಲು ನೇರಗುತ್ತಿಗೆಯಡಿ ತಾತ್ಕಾಲಿಕವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೆಂಕಟೇಶ ರಾಮಚಂದ್ರಪ್ಪ ತಿಳಿಸಿದ್ದಾರೆ.

ಪೂರ್ವ ಪ್ರಾಥಮಿಕ ವಿಭಾಗ 1 ರಿಂದ 5ನೇ ತರಗತಿ ಹಾಗೂ ಪ್ರೌಢ ವಿಭಾಗ 6 ರಿಂದ 8ನೇ ತರಗತಿ ಮತ್ತು 9 ರಿಂದ 12ನೇ ತರಗತಿಗೆ ಬೋಧಿಸಲು ಶಿಕ್ಷಕರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆರ್‍ಸಿಐನಲ್ಲಿ ನೋಂದಣಿ ಹೊಂದಿದ ಹಾಗೂ ಸಿಆರ್‍ಆರ್ ನಂಬರ್ ಮಾನ್ಯತೆ ಹೊಂದಿರುವ ಹಾಗೂ ಚಾಲ್ತಿಯಲ್ಲಿರುವ ಸಂಸ್ಥೆಗಳಿಂದ ನಿಗದಿತ ವಿದ್ಯಾರ್ಹತೆ ಹೊಂದಿರಬೇಕು, ಸೇವಾ ಜ್ಯೇಷ್ಠತೆ ಪರಿಗಣಿಸಲಾಗುವುದು. ಜೂ.10 ರಿಂದ 16 ರೊಳಗಾಗಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಜಿಲ್ಲಾ ಶಾಲಾ ಶಿಕ್ಷಣಾ ಇಲಾಖೆ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿಗೆ ಸಂಪರ್ಕಿಸಲು ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande