ಬೆಂಗಳೂರು, 09 ಜೂನ್ (ಹಿ.ಸ.) :
ಆ್ಯಂಕರ್ : ಕಾಲ್ತುಳಿತದ ಕೊಲೆ ಪ್ರಕರಣದ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ತಮ್ಮ ಹತಾಶ ಪ್ರಯತ್ನ ಮುಂದುವರೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು ಈಗ ಚಿನ್ನಸ್ವಾಮಿ ಕ್ರೀಡಾಂಗಣವನ್ನ ಸ್ಥಳಾಂತರ ಮಾಡಬೇಕು ಎಂಬ ಹೊಸ ವರಸೆ ಶುರು ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸ್ಥಳಾಂತರ ಮಾಡಬೇಕಾಗಿರುವುದು ಚಿನ್ನಸ್ವಾಮಿ ಕ್ರೀಡಾಂಗಣವನ್ನಲ್ಲ ಸಿದ್ದರಾಮಯ್ಯನವರೇ, ಸ್ಥಳಾಂತರ ಆಗಬೇಕಿರುವುದು,ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ತಾವು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮುಖ್ಯಮಂತ್ರಿಗಳ ಅಧಿಕೃತ ನಿವಾಸದಿಂದ ಮೈಸೂರಿಗೋ ಅಥವಾ ಸಿದ್ಧರಾಮನಹುಂಡಿಗೋ ಸ್ಥಳಾಂತರ ಆದರೆ ಅದೇ ಕರ್ನಾಟಕಕ್ಕೆ, ಕನ್ನಡಿಗರಿಗೆ ತಾವು ಮಾಡಬಹುದಾದ ಬಹುದೊಡ್ಡ ಉಪಕಾರ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa