ಬೆಂಗಳೂರು, 09 ಜೂನ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ದಾಖಲಾಗಿರುವ ಎಫ್ಐಆರ್ಗಳನ್ನು ರದ್ದುಗೊಳಿಸಬೇಕು ಎಂದು ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ ಪ್ರೈ. ಲಿ. ಮತ್ತು ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ ಪ್ರೈ. ಲಿ. ನಿಂದ ಉಚ್ಚ ನ್ಯಾಯಾಲಯಕ್ಕೆ ಪ್ರತ್ಯೇಕ ಅರ್ಜಿ ಸಲ್ಲಿಸಲಾಗಿದೆ.
ಡಿಎನ್ಎ ಎಂಟರ್ಟೈನ್ಮೆಂಟ್ನ ವ್ಯವಸ್ಥಾಪಕ ನಿರ್ದೇಶಕ ವೆಂಕಟ ವರ್ಧನ ತಿಮ್ಮಯ್ಯ ಮತ್ತು ಆರ್ಸಿಬಿ ಸಂಸ್ಥೆಯ ಮುಖ್ಯಸ್ಥ ರಾಜೇಶ್ ಮೆನನ್ ಅರ್ಜಿ ಸಲ್ಲಿಸಿದ್ದು, ಘಟನೆಗೆ ತಾವು ಯಾವುದೇ ರೀತಿಯ ಹೊಣೆಗಾರರಲ್ಲ ಎಂಬುದನ್ನು ಅರ್ಜಿಯಲ್ಲಿ ತಿಳಿಸಿದ್ದಾರೆ.
ಕಾಲ್ತುಳಿತ ರಸ್ತೆ ಹಾಗೂ ಪಾದಚಾರಿ ಮಾರ್ಗದಲ್ಲಿ ನಡೆದಿದ್ದು, ಕಾರ್ಯಕ್ರಮದ ವ್ಯವಸ್ಥಾಪಕರಾದ ಅರ್ಜಿದಾರರಿಗೆ ಅದಕ್ಕೆ ಸಂಬಂಧವಿಲ್ಲ. ಅಲ್ಲದೆ, ಈ ಕಾರ್ಯಕ್ರಮ ಸರ್ಕಾರದ ವತಿಯಿಂದ ಆಯೋಜಿಸಲಾಗಿತ್ತು ಮತ್ತು ತಾವು ಯಾವುದೇ ಪ್ರಚಾರ ನಡೆಸಿರಲಿಲ್ಲ, ಯಾರಿಗೂ ಆಹ್ವಾನ ನೀಡಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಒಂದೇ ಘಟನೆಗೆ ಸಂಬಂಧಿಸಿ ಮೂರು ಎಫ್ಐಆರ್ಗಳನ್ನು ಪ್ರತ್ಯೇಕವಾಗಿ ದಾಖಲು ಮಾಡಿರುವುದು ಕಾನೂನುಬಾಹಿರವಾಗಿದ್ದು. ಉಚ್ಚ ನ್ಯಾಯಾಲಯ ಈಗಾಗಲೇ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿರುವುದರಿಂದ ಮತ್ತೊಂದು ಎಫ್ಐಆರ್ಗೆ ಅವಕಾಶವಿಲ್ಲ ಎಂದೂ ಹೇಳಿದ್ದಾರೆ.
ಅರ್ಜಿದಾರರ ವಿರುದ್ದದ ಕ್ರಮವನ್ನು ರಾಜಕೀಯ ಒತ್ತಡದ ಫಲವಾಗಿ ದಾಖಲಿಸಿದ ಎಫ್ಐಆರ್ ಎಂದು ಆರೋಪಿಸಿ, ತಾತ್ಕಾಲಿಕ ತಡೆಯಾಜ್ಞೆ ಜಾರಿಗೊಳಿಸುವಂತೆ ಹಾಗೂ ಎಲ್ಲಾ ಎಫ್ಐಆರ್ಗಳನ್ನು ರದ್ದುಗೊಳಿಸುವಂತೆ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa