ಮೀನುಗಾರಿಕೆ ಇಲಾಖೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ, 09 ಜೂನ್ (ಹಿ.ಸ.) : ಆ್ಯಂಕರ್ : ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ರಾಜ್ಯವಲಯ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. *ರಾಜ್ಯವಲಯ ಯೋಜನೆಗಳು:* ಮೀನುಗಾರಿಕೆ ಸಲಕರಣೆ ಕಿಟ್ ವಿತರಣೆ ಯೋಜನೆಯಡಿ ಸಹಾಯಧನ ನೆರವು, ಮೀನುಮರಿ ಖರೀದಿಸ
ಮೀನುಗಾರಿಕೆ ಇಲಾಖೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ


ಬಳ್ಳಾರಿ, 09 ಜೂನ್ (ಹಿ.ಸ.) :

ಆ್ಯಂಕರ್ : ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ರಾಜ್ಯವಲಯ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

*ರಾಜ್ಯವಲಯ ಯೋಜನೆಗಳು:*

ಮೀನುಗಾರಿಕೆ ಸಲಕರಣೆ ಕಿಟ್ ವಿತರಣೆ ಯೋಜನೆಯಡಿ ಸಹಾಯಧನ ನೆರವು, ಮೀನುಮರಿ ಖರೀದಿಸಲು ನೆರವು ಯೋಜನೆ ಮತ್ತು ಕೆರೆ, ಜಲಾಶಯಗಳ ಅಂಚಿನ ಕೊಳೆಗಳಲ್ಲಿ ಮೀನುಮರಿ ಪಾಲನೆಗೆ ಸಹಾಯಧನ ನೆರವು ನೀಡಲಾಗುವುದು.

ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲ್ಲೂಕಿನ ಮೀನುಗಾರಿಕೆ ಇಲಾಖೆಯ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂ.21 ಕೊನೆಯ ದಿನಾವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ, ಸಿರುಗುಪ್ಪ, ಕಂಪ್ಲಿ ಮತ್ತು ಕುರುಗೋಡು ತಾಲ್ಲೂಕು ವ್ಯಾಪ್ತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಭಾವನಾ-ಮೊ.7406508971 ಮತ್ತು ಸಂಡೂರು ಮೀನುಗಾರಿಕೆ ಸಹಾಯಕ ನಿರ್ದೇಶಕ ಮಂಜುನಾಥ-ಮೊ.7204911897 ಇವರನ್ನು ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande