ಬೀದರ್, 09 ಜೂನ್ (ಹಿ.ಸ.) :
ಆ್ಯಂಕರ್ : ಬೀದರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಆರ್ಥಿಕ ತಜ್ಞ ಡಾ. ಎಂ. ಗೋವಿಂದರಾವ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಬೆಂಗಳೂರಿನ ವತಿಯಿಂದ ನಡೆದ ಸಂವಾದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭಾಗವಹಿಸಿದ್ದರು.
ಸಂವಾದದಲ್ಲಿ ಮಾತನಾಡಿದ ಸಚಿವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಇನ್ನೂ ಸಾಕಷ್ಟು ಸಮಸ್ಯೆಗಳಿವೆ ಶಿಕ್ಷಣ, ಆರೋಗ್ಯ, ಉದ್ಯೋಗ, ರಸ್ತೆ ಮುಂತಾದವುಗಳಲ್ಲಿ ಅಭಿವೃದ್ಧಿ ಅಗತ್ಯವಿದೆ. ಈ ಸಮಿತಿಯ ಶಿಫಾರಸುಗಳು ನಮ್ಮ ಭಾಗದ ಅಭಿವೃದ್ಧಿಗೆ ಸಹಾಯಕವಾಗಬೇಕು ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa