ರಾಯಚೂರು, 09 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷರಾದ ಟಿ.ಎ.ಶರವಣ ಹಾಗೂ ಸಮಿತಿಯ ಸದಸ್ಯರ ತಂಡವು ಜೂನ್ 10 ರಿಂದ 11 ರವರೆಗೆ ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಅಧೀನ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.
ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಅಧಿಕಾರಿ ಸಿಬ್ಬಂದಿಯನ್ನೊಳಗೊಂಡ ತಂಡವು ಜೂನ್ 10ರ ಮಧ್ಯಾಹ್ನ 3 ಗಂಟೆಗೆ ಕಲಬುರಗಿಯಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ ಸಂಜೆ 6.15ಕ್ಕೆ ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿಗೆ ಆಗಮಿಸಿ ವಾಸ್ತವ್ಯ ಮಾಡಲಿದೆ.
ಜೂನ್ 11ರ ಬೆಳಿಗ್ಗೆ 10 ಗಂಟೆಗೆ ಹಟ್ಟಿಯಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಭರವಸೆಗಳ ಸಂಖ್ಯೆ:7622 ಮತ್ತು 7387ಕ್ಕೆ ಸಂಬಂಧಿಸಿದಂತೆ ಸಭೆ ನಡೆಸುವರು. ಬಳಿಕ 11.45ಕ್ಕೆ ಹಟ್ಟಿ ಚಿನ್ನದ ಗಣಿ ವೀಕ್ಷಣೆ ಮಾಡುವರು. ಮಧ್ಯಾಹ್ನ 2 ಗಂಟೆಗೆ ಭೋಜನ ವಿರಾಮ. ಮಧ್ಯಾಹ್ನ 3 ಗಂಟೆಗೆ ಅಲ್ಲಿಂದ ನಿರ್ಗಮಿಸಿ ರಾಯಚೂರ ನಗರಕ್ಕೆ ಆಗಮಿಸುವರು.
ಮಧ್ಯಾಹ್ನ 3.30ಕ್ಕೆ ಕೃಷಿ ಇಲಾಖೆಯ ಭರವಸೆ ಸಂಖ್ಯೆ:8191ಕ್ಕೆ ಸಂಬಂಧಿಸಿದಂತೆ ರಾಯಚೂರು ಕೃಷಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುವರು.
ಮಧ್ಯಾಹ್ನ 4.30ಕ್ಕೆ ರಾಯಚೂರು ನಗರದಲ್ಲಿರುವ ಇಂಡಸ್ಟ್ರಿಯಲ್ ಗ್ರೋತ್ ಸೆಂಟರ್ನ ಮೂಲ ಸೌಲಭ್ಯಗಳ ಪರಿಶೀಲನೆ ಮಾಡುವರು. ಬಳಿಕ ರಾತ್ರಿ 11.55ಕ್ಕೆ ರಾಯಚೂರಿನಿಂದ ರೈಲ್ವೆ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್