ವಿಜಯಪುರ, 9 ಜೂನ್ (ಹಿ.ಸ.):
ಆ್ಯಂಕರ್ : ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದ ಮನೆ ಮೇಲ್ಛಾವಣಿ ಕುಸಿದಿದ್ದು, ಗೃಹಿಣಿ ಸಂಗೀತಾ ಬಾಳಾಸಾಹೇಬ ಪಾಟೀಲ್ (30) ಮೃತರಾಗಿದ್ದಾರೆ.
ಭಾನುವಾರ ತಡರಾತ್ರಿ ಮಲಗಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಪತಿ ಹಾಗೂ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಮಣ್ಣಿನಲ್ಲಿ ಮುಚ್ಚಿದ್ದ ಮೃತದೇಹವನ್ನು ಹೊರತೆಗೆದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa