ಮೋದಿ ಸರ್ಕಾರಕ್ಕೆ ಸೊನ್ನೆ ಅಂಕ : ಸಿದ್ದರಾಮಯ್ಯ
ಮೈಸೂರು, 09 ಜೂನ್ (ಹಿ.ಸ.) : ಆ್ಯಂಕರ್ : ಮೋದಿ ಸರ್ಕಾರದ ೧೧ ವರ್ಷದ ಸಾಧನೆಗೆ ಸೊನ್ನೆ ಅಂಕ ಕೊಡುವುದಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಅವರು ಪ್ರಚಾರದಿಂದ ಬದುಕಿರುವುದು. ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂ
Cm


ಮೈಸೂರು, 09 ಜೂನ್ (ಹಿ.ಸ.) :

ಆ್ಯಂಕರ್ : ಮೋದಿ ಸರ್ಕಾರದ ೧೧ ವರ್ಷದ ಸಾಧನೆಗೆ ಸೊನ್ನೆ ಅಂಕ ಕೊಡುವುದಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಅವರು ಪ್ರಚಾರದಿಂದ ಬದುಕಿರುವುದು. ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ ದಿನ್ ಆಯೇಗಾ , ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದರು. ರೈತರ ಸಮಸ್ಯೆ ಬಗೆಹರಿಸುತ್ತೇನೆ ಎಂದರು, ಆದರೆ ರೈತರು ಒಂದು ವರ್ಷ ಕಾಲ ಚಳುವಳಿಯನ್ನು ಏಕೆ ಮಾಡಿದರು ಎಂದು ಪ್ರಶ್ನಿಸಿದರು.

ಮಾಧ್ಯಮಗಳು ಅವರಿಗೆ ಹೆಚ್ಚಿನ ಪ್ರಚಾರ ನೀಡುತ್ತಿವೆ. ಅವುಗಳ ಮೂಲಕ ಸುಳ್ಳು ವಿಚಾರಗಳಿಗೆ ಪ್ರಚಾರ ನೀಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ಗಳನ್ನು ಘೋಷಣೆ ಮಾಡಿದಾಗ ಇದನ್ನು ಅನುಷ್ಠಾನ ಮಾಡಲಾಗುವುದಿಲ್ಲ. ರಾಜ್ಯ ಸರ್ಕಾರ ದಿವಾಳಿಯಾಗುತ್ತದೆ ಎಂದವರು ಅದನ್ನೇ ನಕಲು ಮಾಡಿದರು ಎಂದರು.

ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿಯಲ್ಲಿ ಅದನ್ನೇ ಜಾರಿ ಮಾಡಿದರು. ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಶೇ.50ರಷ್ಟು ತೆರಿಗೆ ಹಂಚಿಕೆಗೆ ಬೇಡಿಕೆ ಮುಂದಿಟ್ಟಿದ್ದ ಮೋದಿ . ಇವರೇ ಪ್ರಧಾನಿಗಳಾದಾಗ ಏನು ಮಾಡಿದರು? ಎಂದು ಪ್ರಶ್ನಿಸಿದರು.

ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ 5300 ಕೋಟಿಗಳನ್ನು ಕೊಡುವುದಾಗಿ ಘೋಷಿಸಿ ಕೊಡಲಿಲ್ಲ. 15 ನೇ ಹಣಕಾಸು ಆಯೋಗದವರು 11495 ಕೋಟಿ ಕೊಡಬೇಕು ಎಂದು ಶಿಫಾರಸ್ಸು ಮಾಡಿದರೂ ಕೊಡಲಿಲ್ಲ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ಪ್ರಶ್ನೆ ಮಾಡುವುದನ್ನು ಬಿಟ್ಟು ಅಪಪ್ರಚಾರ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande