124ನೇ ನೀರಾವರಿ ಸಲಹಾ ಸಮಿತಿ ಸಭೆ : ಕಾಲುವೆಗಳಿಗೆ ನೀರು ಬಿಡುಗಡೆ
ಬಳ್ಳಾರಿ, 01 ಜುಲೈ (ಹಿ.ಸ.) : ಆ್ಯಂಕರ್ : ಪ್ರಸ್ತಕ ಸಾಲಿನ 124ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಂಡಂತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಮುಂಗಾರು ಹಂಗಾಮಿಗೆ ಜಲಾಶಯದಲ್ಲಿರುವ ನೀರಿನ ಪ್ರಮಾಣ ಅಂದಾಜಿಸಿ ಕಾಲುವೆಗಳಿಗೆ ನೀರು ಹರಿಸಲಾಗುವದು ಎಂದು ಕರ್ನಾಟಕ ನೀರಾವರಿ ನಿ
124ನೇ ನೀರಾವರಿ ಸಲಹಾ ಸಮಿತಿ ಸಭೆ : ಕಾಲುವೆಗಳಿಗೆ ನೀರು ಬಿಡುಗಡೆ


ಬಳ್ಳಾರಿ, 01 ಜುಲೈ (ಹಿ.ಸ.) :

ಆ್ಯಂಕರ್ : ಪ್ರಸ್ತಕ ಸಾಲಿನ 124ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಂಡಂತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಮುಂಗಾರು ಹಂಗಾಮಿಗೆ ಜಲಾಶಯದಲ್ಲಿರುವ ನೀರಿನ ಪ್ರಮಾಣ ಅಂದಾಜಿಸಿ ಕಾಲುವೆಗಳಿಗೆ ನೀರು ಹರಿಸಲಾಗುವದು ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರಾದ ಎಲ್.ಬಸವರಾಜ ಅವರು ತಿಳಿಸಿದ್ದಾರೆ.

ನೀರು ಒದಗಿಸುವ ಕಾಲಾವಧಿ :

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ :

ಜುಲೈ 02 ರಿಂದ 15 ರವರೆಗೆ ಸರಾಸರಿ 2000 ಕ್ಯೂಸೆಕ್ ನಂತೆ, ಜುಲೈ 16 ರಿಂದ 31 ರವರೆಗೆ 3000 ಕ್ಯೂಸೆಕ್ ನಂತೆ ಮತ್ತು ಆಗಸ್ಟ್ 01 ರಿಂದ 30 ರವರೆಗೆ 4100 ಕ್ಯೂಸೆಕ್ ನಂತೆ ಅಥವಾ ಈ ಕಾಲುವೆಯಡಿ ನೀರು ಲಭ್ಯತೆ ಇರುವವರೆಗೆ ಮಾತ್ರ ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆ :

ಜುಲೈ 10 ರಿಂದ 31 ರವರೆಗೆ ಸರಾಸರಿ 700 ಕ್ಯೂಸೆಕ್ ನಂತೆ ಮತ್ತು ಆಗಸ್ಟ್ 01 ರಿಂದ 30 ರ ವರೆಗೆ 1300 ಕ್ಯೂಸೆಕ್ ನಂತೆ ಅಥವಾ ಈ ಕಾಲುವೆಯಡಿ ನೀರು ಲಭ್ಯತೆ ಇರುವವರೆಗೆ ಮಾತ್ರ ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ :

ಜುಲೈ 10 ರಿಂದ 31 ರವರೆಗೆ ಸರಾಸರಿ 500 ಕ್ಯೂಸೆಕ್ ನಂತೆ ಮತ್ತು ಆಗಸ್ಟ್ 01 ರಿಂದ ನವೆಂಬರ್ 30 ರ ವರೆಗೆ 650 ಕ್ಯೂಸೆಕ್ ನಂತೆ ಅಥವಾ ಈ ಕಾಲುವೆಯಡಿ ನೀರು ಲಭ್ಯತೆ ಇರುವವರೆಗೆ ಮಾತ್ರ ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ರಾಯ ಬಸವಣ್ಣ ಕಾಲುವೆ :

ಈಗಾಗಲೇ ಹರಿಸಲಾಗಿದ್ದು, ನವೆಂಬರ್ 30 ರವರೆಗೆ ಸರಾಸರಿ 220 ಕ್ಯೂಸೆಕ್ ನಂತೆ ಅಥವಾ ಈ ಕಾಲುವೆಯಡಿ ನೀರು ಲಭ್ಯತೆ ಇರುವವರೆಗೆ ಮಾತ್ರ ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆ :

ಜುಲೈ 01 ರಿಂದ 25 ಕ್ಯೂಸೆಕ್ ನಂತೆ ಅಥವಾ ಜಲಾಶಯದ ನೀರಿನ ಮಟ್ಟ 1585 ಅಡಿಗಳವರೆಗೆ ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ನದಿಗೆ ಪೂರಕ : ಸುಮಾರು 150 ಕ್ಯೂಸೆಕ್ ನಂತೆ ನದಿ ಪೂರಕ ಕಾರ್ಖಾನೆ ಒಳಗೊಂಡಂತೆ ನೀರು ಹರಿಸಲಾಗುವುದು.

ಪ್ರಸಕ್ತ ಸಾಲಿನ 223ನೇ ತುಂಗಭದ್ರಾ ಮಂಡಳಿ ಸಭೆಯಲ್ಲಿ ಜಲಾಶಯದಲ್ಲಿ 80 ಟಿ.ಎಂ.ಸಿ ಯಷ್ಟು ನೀರನ್ನು ಮಾತ್ರ ಸಂಗ್ರಹಣೆ ಮಾಡಲು ನಿರ್ಧರಿಸಿರುವುದರಿಂದ ಹಾಗೂ ಪ್ರಸ್ತುತ ತುಂಗಭದ್ರಾ ಜಲಾಶಯಕ್ಕೆ ಮುಂಬರುವ ದಿನಗಳಲ್ಲಿ ಹರಿದು ಬರುವ ಒಳಹರಿವಿನ ಪ್ರಮಾಣದ ಮೇಲೆ ಆವಲಂಬಿತವಾಗಿದ್ದು, ಮುಂದೆ ಒಳ ಹರಿವಿನ ಪ್ರಮಾಣದಲ್ಲಿ ಕೊರತೆ ಉಂಟಾದಲ್ಲಿ ಪ್ರಕಟಣೆ ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ರೈತ ಭಾಂದವರಲ್ಲಿ ಮನವಿ :

ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಮಿತವ್ಯಯವಾಗಿ ಬಳಸಿ ಅಧಿಕೃತ ಅಚ್ಚುಕಟ್ಟು ಪ್ರದೇಶದಲ್ಲಿ ನಿಗದಿತ ಬೆಳೆಗಳನ್ನು ಮಾತ್ರ ಬೆಳೆಯಬೇಕು. ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸಬೇಕು. ರೈತರು ಅನಧಿಕೃತವಾಗಿ ನೀರು ಪಡೆದು ಭತ್ತ ಮತ್ತು ಇತರೆ ಬೆಳೆಗಳನ್ನು ಬೆಳೆದಲ್ಲಿ ನೀರಾವರಿ ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande