ದೋಣಿ ದುರಂತ ಓರ್ವ ಸಾವು, ಓರ್ವ ನಾಪತ್ತೆ
ಮುರುಡೇಶ್ವರ, 10 ಜುಲೈ (ಹಿ.ಸ.) : ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರ ಸಮೀಪದ ಸಮುದ್ರದಲ್ಲಿ ಸಂಭವಿಸಿದ ದೋಣಿ ಅಪಘಾತದಲ್ಲಿ ಓರ್ವ ಮೀನುಗಾರ ಮೃತಪಟ್ಟಿದ್ದು, ಓರ್ವ ನಾಪತ್ತೆಯಾಗಿದ್ದು. ಮತ್ತೋರ್ವ ಪ್ರಾಣಪಾಯದಿಂದ ಪಾರಾಗಿದ್ದಾರೆ. ಜನಾರ್ಧನ ಹರಿಕಾಂತ್ ಎಂಬುವವರಿಗೆ ಸೇರಿದ ದೋಣಿ ಸಮುದ್ರದಲ್
ದೋಣಿ ದುರಂತ ಓರ್ವ ಸಾವು, ಓರ್ವ ನಾಪತ್ತೆ


ಮುರುಡೇಶ್ವರ, 10 ಜುಲೈ (ಹಿ.ಸ.) :

ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರ ಸಮೀಪದ ಸಮುದ್ರದಲ್ಲಿ ಸಂಭವಿಸಿದ ದೋಣಿ ಅಪಘಾತದಲ್ಲಿ ಓರ್ವ ಮೀನುಗಾರ ಮೃತಪಟ್ಟಿದ್ದು, ಓರ್ವ ನಾಪತ್ತೆಯಾಗಿದ್ದು. ಮತ್ತೋರ್ವ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಜನಾರ್ಧನ ಹರಿಕಾಂತ್ ಎಂಬುವವರಿಗೆ ಸೇರಿದ ದೋಣಿ ಸಮುದ್ರದಲ್ಲಿ ಮಗುಚಿ ಬಿದ್ದಿದೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾಧವ ಹರಿಕಾಂತ (45) ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ದೋಣಿಯಲ್ಲಿದ್ದ ವೆಂಕಟೇಶ್ ಅಣ್ಣಪ್ಪ ಹರಿಕಾಂತ್ (26) ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಮತ್ತೋರ್ವ ಮೀನುಗಾರ ಆನಂದ ಅಣ್ಣಪ್ಪ ಹರಿಕಾಂತ ಅವರನ್ನು ರಕ್ಷಿಸಲಾಗಿದೆ.

ಈ ಕುರಿತು ಮುರ್ಡೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande