ಗುಜರಾತ್ ಸೇತುವೆ ದುರಂತ : ಸಾವಿನ ಸಂಖ್ಯೆ 15ಕ್ಕೆ ಏರಿಕೆ
ವಡೋದರಾ, 10 ಜುಲೈ (ಹಿ.ಸ.) : ಆ್ಯಂಕರ್ : ಗುಜರಾತ್‌ನ ಆನಂದ್ ಮತ್ತು ವಡೋದರಾ ನಗರಗಳನ್ನು ಸಂಪರ್ಕಿಸುವ ಗಂಭೀರ ಸೇತುವೆ ಕುಸಿತದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿದೆ. ಇನ್ನೂ ಮೂವರು ನಾಪತ್ತೆಯಾಗಿದ್ದು, ಎರಡನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಅಪಘಾತ ಬುಧವಾರ ಬೆಳಿಗ
Search


ವಡೋದರಾ, 10 ಜುಲೈ (ಹಿ.ಸ.) :

ಆ್ಯಂಕರ್ : ಗುಜರಾತ್‌ನ ಆನಂದ್ ಮತ್ತು ವಡೋದರಾ ನಗರಗಳನ್ನು ಸಂಪರ್ಕಿಸುವ ಗಂಭೀರ ಸೇತುವೆ ಕುಸಿತದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿದೆ. ಇನ್ನೂ ಮೂವರು ನಾಪತ್ತೆಯಾಗಿದ್ದು, ಎರಡನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಅಪಘಾತ ಬುಧವಾರ ಬೆಳಿಗ್ಗೆ ಸಂಭವಿಸಿದ್ದು, ಸುಮಾರು 10-15 ಮೀಟರ್ ಉದ್ದದ ಸೇತುವೆ ಸ್ಲ್ಯಾಬ್ ನದಿಗೆ ಕುಸಿದಿದೆ ಎಂದು ವಡೋದರಾ (ಗ್ರಾಮೀಣ) ಎಸ್‌ಪಿ ರೋಹನ್ ಆನಂದ್ ತಿಳಿಸಿದ್ದಾರೆ. ಎರಡು ವಾಹನಗಳನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ, ಆದರೆ ಇನ್ನೂ ಎರಡು ವಾಹನಗಳು ನದಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande