ಯುವಕನ ಕೊಚ್ಚಿ ಕೊಲೆ
ವಿಜಯಪುರ, 11 ಜುಲೈ (ಹಿ.ಸ.) : ಆ್ಯಂಕರ್ : ಕೊಲೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ ಬಳಿ ನಡೆದಿದೆ. ಅರಕೇರಿ ಗ್ರಾಮದ ಕರಾಡದೊಡ್ಡಿ ರಸ್ತೆಯ ಬಳಿಯಲ್ಲಿ ಶವ ಪತ್ತೆಯಾಗಿದೆ. ಬಿಳಿನಸಿದ್ದ ದುಂಡಪ್ಪ ಒಡೆಯರ್ (33) ಶವವಾಗಿ ಪತ್ತೆಯಾಗಿರರ
ಕೊಲೆ


ವಿಜಯಪುರ, 11 ಜುಲೈ (ಹಿ.ಸ.) :

ಆ್ಯಂಕರ್ : ಕೊಲೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ ಬಳಿ ನಡೆದಿದೆ.

ಅರಕೇರಿ ಗ್ರಾಮದ ಕರಾಡದೊಡ್ಡಿ ರಸ್ತೆಯ ಬಳಿಯಲ್ಲಿ ಶವ ಪತ್ತೆಯಾಗಿದೆ. ಬಿಳಿನಸಿದ್ದ ದುಂಡಪ್ಪ ಒಡೆಯರ್ (33) ಶವವಾಗಿ ಪತ್ತೆಯಾಗಿರರುವ ಯುವಕನಾಗಿದ್ದಾನೆ. ಅರಕೇರಿ ಗ್ರಾಮದ ವಾಸಿ ಬಿಳನಸಿದ್ದ.

ಅಪರಿಚಿತರಿಂದ ಬಿಳಿನಸಿದ್ದ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸ್ಥಳದಲ್ಲಿ ಕೊಲೆಯಾದ ಯುವಕನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದ್ದು ಪೊಲೀಸರಿಂದ ತನಿಖೆ ಮುಂದುವರೆದಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande