ಬೆಂಗಳೂರು, 12 ಜುಲೈ (ಹಿ.ಸ.) :
ಆ್ಯಂಕರ್ : ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯಿಂದ ಆಗಮಿಸಿದ್ದ ರೈತ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು.
ಕೈಗಾರಿಕೆಗಾಗಿ 449 ಎಕರೆ ಭೂಮಿಯನ್ನು ನೀಡಲು ಸಿದ್ಧವಿರುವುದಾಗಿ ತಿಳಿಸಿ, ಸ್ವಾಧೀನ ಪಡಿಸಿಕೊಳ್ಳುವ ಭೂಮಿಗೆ ನ್ಯಾಯಯುತವಾದ ಬೆಲೆ ನಿಗದಿ ಪಡಿಸಲು ಮನವಿ ಸಲ್ಲಿಸಿದರು.
ಸಚಿವರಾದ ಕೆ. ಎಚ್. ಮುನಿಯಪ್ಪ, ಬಿ. ಎಸ್. ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಇತರರು ಈ ವೇಳೆ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa