ವಿಜಯಪುರ, 12 ಜುಲೈ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಬಸವಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿಕೋಶ ಹಾಗೂ ಪುರಸಭೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನಿರ್ಮಿಸಿರುವ ಜಿ +1 ಆಸರೆ ಯೋಜನೆ ಸಚಿವ ಶಿವಾನಂದ್ ಪಾಟೀಲ ಮನೆಗಳ ಹಕ್ಕು ಪತ್ರ ವಿತರಣೆ ಮಾಡಿದರು. ತದನಂತರ ವಿಕಲಚೇತನರಿಗೆ ಸೈಕಲ್ ಮತ್ತು ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವ ಶಿವಾನಂದ್ ಪಾಟೀಲ್, ಆಶ್ರಯ ಕಾಲೋನಿಯಲ್ಲಿ ರಸ್ತೆಗಳು ಒಳಚರಂಡಿ ಕುಡಿಯುವ ನೀರಿನ ವ್ಯವಸ್ಥೆ ಹಲವಾರು ಸೌಲಭ್ಯಗಳನ್ನು ನಾವು ಮಾಡಿದ್ದೇವೆ ಎಂದರು. ಇದೇ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಅಂಗವಿಕಲರು ಊರಿನ ಹಿರಿಯರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande