ಬೆಂಗಳೂರು, 12 ಜುಲೈ (ಹಿ.ಸ.) :
ಆ್ಯಂಕರ್ : 5 ವರ್ಷ ನಾನೇ ಮುಖ್ಯಮಂತ್ರಿ ಎಂದು ಹಳ್ಳಿಯಿಂದ ದಿಲ್ಲಿವರೆಗೆ ಹಾದಿ ಬೀದಿಯಲ್ಲಿ ಬೊಬ್ಬೆ ಹೊಡೆಯುವ ಸಿದ್ದರಾಮಯ್ಯ ಅವರಿಗೆ ರಾಜ್ಯಾದ್ಯಂತ 10 ಪಾಲಿಕೆಗಳ 25,000ಕ್ಕೂ ಹೆಚ್ಚು ಸಿಬ್ಬಂದಿ 5 ದಿನಗಳಿಂದ ಮಾಡುತ್ತಿರುವ ಮುಷ್ಕರ ಕಣ್ಣಿಗೆ ಕಾಣುತ್ತಿಲ್ಲ, ಕಿವಿಗೆ ಬೀಳುತ್ತಿಲ್ಲ.
ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಕುರ್ಚಿ ಕಿತ್ತಾಟದಲ್ಲಿ, ಬಣ ಬಡಿದಾಟದಲ್ಲಿ ಸಂಪೂರ್ಣವಾಗಿ ಮೈಮರೆತಿರುವ ಕಾಂಗ್ರೆಸ್ ಸರ್ಕಾರದ ಯಾವ ಮಂತ್ರಿಗಳೂ ಇದುವರೆಗೂ ಪ್ರತಿಭಟನಾ ನಿರತ ಪಾಲಿಕೆ ಸಿಬ್ಬಂದಿಗಳನ್ನು ಭೇಟಿ ಮಾಡುವ ಗೋಜಿಗೇ ಹೋಗಿಲ್ಲ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಊಟಕ್ಕಿಲ್ಲದ ಉಪ್ಪಿನಕಾಯಿ ಎಂಬಂತೆ ಅಧಿಕಾರವಿಲ್ಲದ ಕುರ್ಚಿಯಲ್ಲಿ ಎಷ್ಟು ದಿನ ಅಂಟಿಕೊಂಡು ಕೂರುತ್ತೀರಿ ಸ್ವಾಮಿ. ರಾಜೀನಾಮೆ ಕೊಟ್ಟು ಹೊರಡಿ. ಒಂದು ಸುಭದ್ರ, ಸುಸ್ಥಿರ, ಜನಪರ ಆಡಳಿತ ಕೊಡಬಲ್ಲ ಬಲಿಷ್ಠ ಮುಖ್ಯಮಂತ್ರಿಗಾಗಿ ಕನ್ನಡಿಗರು ಕಾಯುತ್ತಿದ್ದಾರೆ. ರಾಜೀನಾಮೆ ಕೊಟ್ಟು ಕನ್ನಡಿಗರ ಆಶಯ ಈಡೇರಿಸಿ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa