ಜುಲೈ ೧೪ರಿಂದ ತುಂಗಾ ಮೇಲ್ದಂಡೆ ಕಾಲುವೆಗೆ ನೀರು ಬಿಡುಗಡೆ
ಶಿವಮೊಗ್ಗ, 12 ಜುಲೈ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲೆ ಗಾಜನೂರು ಡ್ಯಾಂನಿಂದ ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶಗಳಿಗೆ ದಿನಾಂಕ:14.07.2025 ರಿಂದ ನೀರು ಹರಿ
ಜುಲೈ ೧೪ರಿಂದ ತುಂಗಾ ಮೇಲ್ದಂಡೆ ಕಾಲುವೆಗೆ ನೀರು ಬಿಡುಗಡೆ


ಶಿವಮೊಗ್ಗ, 12 ಜುಲೈ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲೆ ಗಾಜನೂರು ಡ್ಯಾಂನಿಂದ ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶಗಳಿಗೆ ದಿನಾಂಕ:14.07.2025 ರಿಂದ ನೀರು ಹರಿಸಲಾಗುವುದು.

ಅಚ್ಚುಕಟ್ಟು ರೈತರಿಗೆ ಹಾಗೂ ಸಾರ್ವಜನಿಕರಿಗೆ, ಜನ, ಜಾನುವಾರುಗಳೊಂದಿಗೆ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆಯಿಂದಿರಲು ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande