ವಿಶ್ವ ಜನಸಂಖ್ಯಾ ದಿನಾಚರಣೆ: ರಾಯಚೂರಲ್ಲಿ ಜನ ಜಾಗೃತಿ ಜಾಥಾ
ರಾಯಚೂರು, 12 ಜುಲೈ (ಹಿ.ಸ.) : ಆ್ಯಂಕರ್ : ವಿಶ್ವ ಜನಸಂಖ್ಯಾ ದಿನಾಚರಣೆಯ ಪ್ರಯುಕ್ತ ನಗರದಲ್ಲಿ ಶುಕ್ರವಾರ ಜಾಗೃತಿ ಜಾಥಾಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಅವರು ಚಾಲನೆ ನೀಡಿದ್ದಾರೆ. ಮಹಿಳೆಯ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ಥಿರತೆಯು ತಾಯ್ತನಕ್ಕೆ
ವಿಶ್ವ ಜನಸಂಖ್ಯಾ ದಿನಾಚರಣೆ: ರಾಯಚೂರಲ್ಲಿ ಜನ ಜಾಗೃತಿ ಜಾಥಾ


ವಿಶ್ವ ಜನಸಂಖ್ಯಾ ದಿನಾಚರಣೆ: ರಾಯಚೂರಲ್ಲಿ ಜನ ಜಾಗೃತಿ ಜಾಥಾ


ವಿಶ್ವ ಜನಸಂಖ್ಯಾ ದಿನಾಚರಣೆ: ರಾಯಚೂರಲ್ಲಿ ಜನ ಜಾಗೃತಿ ಜಾಥಾ


ವಿಶ್ವ ಜನಸಂಖ್ಯಾ ದಿನಾಚರಣೆ: ರಾಯಚೂರಲ್ಲಿ ಜನ ಜಾಗೃತಿ ಜಾಥಾ


ರಾಯಚೂರು, 12 ಜುಲೈ (ಹಿ.ಸ.) :

ಆ್ಯಂಕರ್ : ವಿಶ್ವ ಜನಸಂಖ್ಯಾ ದಿನಾಚರಣೆಯ ಪ್ರಯುಕ್ತ ನಗರದಲ್ಲಿ ಶುಕ್ರವಾರ ಜಾಗೃತಿ ಜಾಥಾಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಅವರು ಚಾಲನೆ ನೀಡಿದ್ದಾರೆ.

ಮಹಿಳೆಯ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ಥಿರತೆಯು ತಾಯ್ತನಕ್ಕೆ ಸರಿಯಾದ ವಯಸ್ಸು ಎಂಬ ಘೋಷವಾಕ್ಯದೊಡನೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ವಿಭಾಗ ರಾಯಚೂರು, ರಿಮ್ಸ್ ಭೋಧಕ ಆಸ್ಪತ್ರೆ, ಎಸ್.ಕೆ.ಇ. ಪ್ಯಾರಾ ಮೆಡಿಕಲ್ ಕಾಲೇಜ್ ರಾಯಚೂರು ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಬಳಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸುಖದಿಂದ ಸಂಸಾರ ನಡೆಸಲು ಎರಡು ಮಕ್ಕಳು ಸಾಕು. ಇದರಿಂದ ಗುಣಮಟ್ಟದ ಶಿಕ್ಷಣ, ಆರೋಗ್ಯ, ಪೌಷ್ಟಿಕ ಆಹಾರ ಕೊಡಲು ಸಾಧ್ಯವಾಗುತ್ತದೆ. ಜೊತೆಗೆ ದೇಶದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದರು.

ಹೆಚ್ಚುತ್ತಿರುವ ಜನಸಂಖ್ಯೆಯಿಂದ ಆಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ, ಅರಿವು ಮೂಡಿಸಲು ವಿಶ್ವ ಜನಸಂಖ್ಯಾ ದಿನ ಆಚರಿಸಲಾಗುತ್ತಿದೆ. ಮಹಿಳೆಯ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ಥಿರತೆಯು ತಾಯ್ತನಕ್ಕೆ ಸರಿಯಾದ ವಯಸ್ಸು ಎಂಬುದು ಈ ಸಲದ ದಿನಾಚರಣೆಯ ಘೋಷಣೆಯಾಗಿದೆ ಎಂದು ಅವರು ತಿಳಿಸಿದರು.

ದೇಶದ ಅಭಿವೃದ್ಧಿಗೆ ಜನ ಬೇಕು. ಆದರೆ, ಮಿತಿಮೀರಿದ ಜನಸಂಖ್ಯೆ ಅಭಿವೃದ್ಧಿಗೆ ಮಾರಕವಾಗುತ್ತದೆ. ಸಮಸ್ಯೆಗಳು ಹೆಚ್ಚುತ್ತಾ ಹೋಗುತ್ತವೆ. ಆದ್ದರಿಂದ ಚಿಕ್ಕ ಸಂಸಾರ ಇದ್ದಷ್ಟು ಉತ್ತಮ ಜೀವನ ನಡೆಸಬಹುದು. ಮದುವೆಯಾಗಲು ಗಂಡಿಗೆ 21 ವರ್ಷ, ಹೆಣ್ಣಿಗೆ 18 ತುಂಬಿರಬೇಕು. ಮಕ್ಕಳ ಜನನದ ಅಂತರ ಕನಿಷ್ಠ 3 ವರ್ಷ ಇರಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಂಖ್ಯಾ ದರವನ್ನು ಹೊಂದಿದ್ದು, ಇದನ್ನು ಕಡಿಮೆ ಮಾಡಲು ಜನಸಾಮಾನ್ಯರು ಜಿಲ್ಲಾಡಳಿದೊಂದಿಗೆ ಕೈಜೋಡಿಸಬೇಕು. ಜನನದ ಅಂತರವನ್ನು ಹೆಣ್ಣುಮಕ್ಕಳು ಹಾಗೂ ಪುರುಷರು ಪಾಲಿಸಬೇಕು. ಅದಕ್ಕಾಗಿ ಶಸ್ತ್ರ ಚಿಕಿತ್ಸೆಗಳಿವೆ. ಅವುಗಳನ್ನು ಬಳಸಿಕೊಳ್ಳಬೇಕೆಂದರು.

ನಗರದ ಪ್ರಮುಖ ಬೀದಿಗಳಲ್ಲಿ ಜಾಥ: ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಆಯೋಜಿಸಿರುವ ಜಾಥಾವು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಿಂದ ಪ್ರಾರಂಭವಾಗಿ ಭಗತ್‍ಸಿಂಗ್ ವೃತ್ತದ ಮಾರ್ಗವಾಗಿ ತಿನ್‍ಕಂದಿಲ್, ಉಸ್ಮಾನಿಯಾ ತರಕಾರಿ ಮಾರುಕಟ್ಟೆ ಮೂಲಕ ಮಹಾವಿರ ವೃತ್ತದವರೆಗೆ ಸಾಗಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ, ಜಿಲ್ಲಾ ಶಸ್ತ್ರ ಚಿಕಿತ್ಸೆಕರಾದ ಡಾ.ವಿಜಯಶಂಕರ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಶಿವಕುಮಾರ, ರಿಮ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಹುಲ್ ಕೀರ್ತ, ಜಿಲ್ಲಾ ವಿಬಿಡಿಸಿ ಅಧಿಕಾರಿ ಡಾ.ಚಂದ್ರಶೇಖರಯ್ಯ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳಾದ ಡಾ.ಎಂ.ಡಿ.ಶಾಕೀರ್, ಡಾ.ಗಣೇಶ್, ರಾಯಚೂರು ತಾಲೂಕ ಆರೋಗ್ಯಾಧಿಕಾರಿ ಡಾ.ಪ್ರಜ್ವಲ್ ಸೇರಿದಂತೆ ರಿಮ್ಸ್, ಎಸ್.ಕೆ.ಇ. ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande