ಧಾರವಾಡ, 13 ಜುಲೈ (ಹಿ.ಸ.) :
ಆ್ಯಂಕರ್ : ಮ್ಯಾಜಿಸ್ಟ್ರೇಟ್ಗಳ ಪೀಠವಾಗಿರುವ ಧಾರವಾಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಬಿ.ವೈ.ಪಾಟೀಲ ಹಾಗೂ ಮೂವರು ಸದಸ್ಯರನ್ನು ಆಯ್ಕೆ ಮಾಡಿ, ರಾಜ್ಯಪಾಲರು ಆದೇಶಿಸಿದ್ದಾರೆ.
ಈ ಕುರಿತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾ ಜಾವೂರ ಪ್ರಕಟಣೆ ನೀಡಿದ್ದು, ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ 2000 ರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ಗಳ ಪೀಠವಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ರಚಿಸಲಾಗಿದೆ. ಇದು ಮಕ್ಕಳ ಆರೈಕೆ, ರಕ್ಷಣೆ, ಚಿಕಿತ್ಸೆ, ಅಭಿವೃದ್ಧಿ ಮತ್ತು ಪುನರ್ವಸತಿಗಾಗಿ ಪ್ರಕರಣಗಳನ್ನು ವಿಲೇವಾರಿ ಮಾಡುವ ಅಂತಿಮ ಅಧಿಕಾರ ಹಾಗೂ ಅವರ ಮೂಲಭೂತ ಅಗತ್ಯಗಳು ಮತ್ತು ಮಾನವ ಹಕ್ಕುಗಳ ರಕ್ಷಣೆಯನ್ನು ಒದಗಿಸುವ ಅಂತಿಮ ಅಧಿಕಾರ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.
ನೂತನ ಸಮಿತಿಗೆ ಅಧ್ಯಕ್ಷರಾಗಿ ಬಿ.ವೈ. ಪಾಟೀಲ್ (9498221600) ಮತ್ತು ಸದಸ್ಯರಾಗಿ ನೂರ್ಜಹಾನ್ ಎಂ. ಕಿಲ್ಲೇದಾರ್ (9945564952), ಸುಚಿತ್ರಾ ಕಡಿಬಾಗಿಲು (7676696754), ರವಿ ಭಂಡಾರಿ (9739935029) ಆಯ್ಕೆ ಆಗಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ವಿವಿಧ ಸಂಕಷ್ಟ ಪರಿಸ್ಥಿತಿಯಲ್ಲಿರುವ ಹಾಗೂ ಪಾಲನೆ, ಪೋಷಣೆ ಮತ್ತು ರಕ್ಷಣೆ ಅಗತ್ಯತೆ ಇರುವ 0 ದಿಂದ 18 ವರ್ಷದ ಒಳಗಿನ ಮಕ್ಕಳ ಪುನರ್ವಸತಿಗಾಗಿ ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಧಾರವಾಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯನ್ನು 2025-26 ರಿಂದ ಮುಂದಿನ 3 ವರ್ಷಗಳ ಅವಧಿವರೆಗೆ ಪುನರ್ ರಚಿಸಲಾಗಿದೆ.
ಜಿಲ್ಲೆಯಲ್ಲಿ ಸಂಕಷ್ಟ ಪರಿಸ್ಥಿತಿಯಲ್ಲಿರುವ ಅಂದರೆ ಬಾಲ್ಯವಿವಾಹಕ್ಕೆ ಒಳಗಾದ, ಲೈಂಗಿಕ,ದೈಹಿಕ ದೌರ್ಜನ್ಯಕ್ಕೆ ಒಳಗಾದ, ಭಿಕ್ಷಾಟನೆಯಲ್ಲಿ ತೊಡಗಿಸಿಕೊಂಡ, ಬಾಲಕಾರ್ಮಿಕ ಮಕ್ಕಳು, ಮನೆ ಬಿಟ್ಟು ಓಡಿ ಹೋದ ಮಕ್ಕಳು, ದುಶ್ಚಟಕ್ಕೆ ಬಲಿಯಾದ, ದತ್ತು ಪ್ರಕ್ರಿಯೆ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಮಕ್ಕಳ ಪ್ರಕರಣಗಳನ್ನು ಈ ಸಮಿತಿ ನಿರ್ವಹಿಸಲಿದೆ.
ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಸಿವಿಲ್ ನ್ಯಾಯಾಧೀಶರ ಅಧಿಕಾರವನ್ನು ಶಾಸನಬದ್ಧವಾಗಿ ಹೊಂದಿರುತ್ತಾರೆ. ಹಲವಾರು ವರ್ಷಗಳಿಂದ ಮಕ್ಕಳ ಸೇವೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಎಂ.ಎಸ್.ಡಬ್ಲ್ಯೂ ಅಥವಾ ಸಮಾಜಶಾಸ್ತ್ರ ವಿಷಯಗಳಲ್ಲಿ ಸ್ನಾನಕೋತ್ತರ ಪದವಿಯೊಂದಿಗೆ ಕಾನೂನಿನ ವಿಷಯದಲ್ಲಿ, ಸ್ನಾನಕೋತ್ತರ ಪದವಿ, ಪದವಿ ಪಡೆದವರನ್ನು ಈ ಸಮಿತಿಗೆ ಕರ್ನಾಟಕ ರಾಜ್ಯದ ರಾಜ್ಯಪಾಲರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಸಮಿತಿಯು ಜಿಲ್ಲಾ ಆಡಳಿತದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಇತರೆ ಇಲಾಖೆಗಳಾದ ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಹಾಗೂ ಪ.ಜಾಮತ್ತು ಪ.ಪಂ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ಸಹಯೋಗದೊಂದಿಗೆ ಸಮಿತಿ ಕಾರ್ಯನಿರ್ವಹಿಸಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa