ಉಡುಪಿ, 17 ಜುಲೈ (ಹಿ.ಸ.) :
ಆ್ಯಂಕರ್ : ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ, ನಾಪತ್ತೆಯಾಗಿದ್ದ ಮೂವರು ಮೀನುಗಾರರು ಮೃತಪಟ್ಟಿದ್ದಾರೆ.
ನೀರುಪಾಲಾದವರು ಸುರೇಶ್ ಖಾರ್ವಿ (45), ರೋಹಿತ್ ಖಾರ್ವಿ (38) ಮತ್ತು ಜಗದೀಶ್ ಖಾರ್ವಿ (36) ಅರಬ್ಬಿ ಸಮುದ್ರದಲ್ಲಿ ತೀವ್ರ ಅಲೆಗಳ ಹಿನ್ನೆಲೆಯಲ್ಲಿ ದೋಣಿ ವಾಪಸ್ ಆಗುವ ಸಂದರ್ಭದಲ್ಲಿ ಮಗುಚಿದ್ದು, ಈ ವೇಳೆ ಓರ್ವ ನೀರಿಗೆ ಬಿದ್ದಿದ್ದು, ಅವರನ್ನು ರಕ್ಷಿಸಲು ಮುಂದಾದ ಇತರ ಇಬ್ಬರೂ ನೀರುಪಾಲಾಗಿದ್ದರು. ಮೂವರು ಮೀನುಗಾರರು ಮೃತಪಟ್ಟಿರುವುದಾಗಿ ಜಿಲ್ಲಾಡಳಿತ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa