ಹೊಸಪೇಟೆ, 18 ಜುಲೈ (ಹಿ.ಸ.) :
ಆ್ಯಂಕರ್ : ನಗರ ಉಪವಿಭಾಗ 1 ಮತ್ತು 2 ರ ಗ್ರಾಹಕರ ಕುಂದುಕೊರತೆ ಹಾಗೂ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ತಿಂಗಳು ಗ್ರಾಹಕರ ಸಂವಾದ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಮಾಹೆಯ ಸಂವಾದ ಸಭೆಯನ್ನು ಜು.19 ರಂದು ಮಧ್ಯಾಹ್ನ 4 ಗಂಟೆಯಿಂದ 5 ಗಂಟೆಯವರೆಗೆ ಹೊಸಪೇಟೆ ನಗರದ ಉಪವಭಾಗ-1 ರ ಕಚೇರಿಯಲ್ಲಿ ಗ್ರಾಹಕರ ಸಂವಾದ ಸಭೆಯನ್ನು ಆಯೋಜಿಸಲಾಗಿದೆ.
ದಿನಾಂಕದಂದು ಸಭೆಗೆ ಭಾಗವಹಿಸಿ ವಿದ್ಯುತ್ ಸಮಸ್ಯೆಗಳು ಇದ್ದಲ್ಲಿ ತಮ್ಮ ಅಹವಾಲುಗಳನ್ನು ಸಭೆಯಲ್ಲಿ ಸಲ್ಲಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ನಗರ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್