ಬೆಂಗಳೂರಿನಲ್ಲಿರುವ ಅಕ್ರಮವಾಸಿಗಳ ಕುರಿತು ತನಿಖೆಗೆ ಶೋಭಾ ಕರಂದ್ಲಾಜೆ ಆಗ್ರಹ
ಬೆಂಗಳೂರು, 19 ಜುಲೈ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಹೆಬ್ಬಾಳದ ಅಮಾನಿಕೆರೆ ಗ್ರಾಮದಲ್ಲಿ ಪಶ್ಚಿಮ ಬಂಗಾಳ, ಕೋಲ್ಕತ್ತಾದವರು ಎಂದು ಹೇಳಿಕೊಂಡು ಅನೇಕ ಜನರು ಬೀಡು ಬಿಟ್ಟಿದ್ದಾರೆ. ಅವರ ಬಳಿ ನಕಲಿ ಆಧಾರ್‌ ಕಾರ್ಡ್‌, ನಕಲಿ ವೋಟರ್‌ ಐಡಿ ಇದೆ. ಇವರೆಲ್ಲರೂ ಇಲ್ಲಿ ಕಾನೂನು ಬಾಹಿರವಾಗಿ ವಾಸಿಸುತ್ತಿದ್ದಾರ
Demand


ಬೆಂಗಳೂರು, 19 ಜುಲೈ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಹೆಬ್ಬಾಳದ ಅಮಾನಿಕೆರೆ ಗ್ರಾಮದಲ್ಲಿ ಪಶ್ಚಿಮ ಬಂಗಾಳ, ಕೋಲ್ಕತ್ತಾದವರು ಎಂದು ಹೇಳಿಕೊಂಡು ಅನೇಕ ಜನರು ಬೀಡು ಬಿಟ್ಟಿದ್ದಾರೆ. ಅವರ ಬಳಿ ನಕಲಿ ಆಧಾರ್‌ ಕಾರ್ಡ್‌, ನಕಲಿ ವೋಟರ್‌ ಐಡಿ ಇದೆ. ಇವರೆಲ್ಲರೂ ಇಲ್ಲಿ ಕಾನೂನು ಬಾಹಿರವಾಗಿ ವಾಸಿಸುತ್ತಿದ್ದಾರೆ. ಈ ಜನರು ಇಲ್ಲಿ ಕಸದ ಗುಡ್ಡೆಯನ್ನೇ ಸೃಷ್ಟಿ ಮಾಡಿದ್ದಾರೆ. ಇವರ ಅಕ್ರಮ ಚಟುವಟಿಕೆಯ ಬಗ್ಗೆ ಸರ್ಕಾರವಾಗಲಿ, ಸರ್ಕಾರಿ ಇಲಾಖೆಗಳಾಗಲಿ ತುಟಿ ಬಿಚ್ಚುತ್ತಿಲ್ಲ. ರಾಜ್ಯ ಕಾಂಗ್ರೆಸ್‌ ಸರ್ಕಾರ ಈ ಅಕ್ರಮವಾಸಿಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande