ಗಂಗಾವತಿ, 02 ಜುಲೈ (ಹಿ.ಸ.) :
ಆ್ಯಂಕರ್ : ಗಂಗಾವತಿ ವಿಧಾನ ಸಭಾ ಕ್ಷೇತ್ರದ 2025-26ನೇ ಸಾಲಿನ ದ್ವಿತೀಯ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜುಲೈ 7 ರಂದು ಬೆಳಗ್ಗೆ 10.30 ಗಂಟೆಗೆ ಗಂಗಾವತಿಯ ತಾಲೂಕ ಪಂಚಾಯತನ ಮಂಥನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಗಂಗಾವತಿ ವಿಧಾನ ಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು.
ಸಂಬಂಧಿಸಿದ ಅಧಿಕಾರಿಗಳು 2025-26ನೇ ಸಾಲಿನ ಏಪ್ರಿಲ್ ನಿಂದ ಜೂನ್ 2025ರ ಅಂತ್ಯದವರೆಗೆ ಸಾಧಿಸಿದ ಪ್ರಗತಿ ವರದಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗುವಂತೆ ಗಂಗಾವತಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್