ಸಚಿವರ ನಡೆ ಗ್ರಾಮ ಪಂಚಾಯಿತಿಯ ಕಡೆ
ಮಂಡ್ಯ, 20 ಜುಲೈ (ಹಿ.ಸ.) : ಆ್ಯಂಕರ್ : ಸಚಿವರ ನಡೆ ಗ್ರಾಮ ಪಂಚಾಯಿತಿಯ ಕಡೆ ಎನ್ನುವ ವಿಶೇಷ ಕಾರ್ಯಕ್ರಮದ ಭಾಗವಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನಾಗಮಂಗಲ ವಿಧಾನ ಸಭಾ ಕ್ಷೇತ್ರದ ದೇವಲಾಪುರ ಹೋಬಳಿಯ ಭೀಮನಹಳ್ಳಿ ಗ್ರಾಮ ಪಂಚಾಯಿತಿಗೆ ಅಧಿಕಾರಿಗಳೊಂದಿಗೆ ಭೇಟಿನೀಡಿ, ಜನ ಸಂಪರ್ಕ ಸಭೆ
Gp


ಮಂಡ್ಯ, 20 ಜುಲೈ (ಹಿ.ಸ.) :

ಆ್ಯಂಕರ್ : ಸಚಿವರ ನಡೆ ಗ್ರಾಮ ಪಂಚಾಯಿತಿಯ ಕಡೆ ಎನ್ನುವ ವಿಶೇಷ ಕಾರ್ಯಕ್ರಮದ ಭಾಗವಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನಾಗಮಂಗಲ ವಿಧಾನ ಸಭಾ ಕ್ಷೇತ್ರದ ದೇವಲಾಪುರ ಹೋಬಳಿಯ ಭೀಮನಹಳ್ಳಿ ಗ್ರಾಮ ಪಂಚಾಯಿತಿಗೆ ಅಧಿಕಾರಿಗಳೊಂದಿಗೆ ಭೇಟಿನೀಡಿ, ಜನ ಸಂಪರ್ಕ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಜನತೆಯ ಅಹವಾಲುಗಳನ್ನು ಸ್ವೀಕರಿಸಿ, ಅವರ ಅನೇಕ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲಾಯಿತು. ಇದೇ ವೇಳೆ ಇ-ಸ್ವತ್ತು ಹಾಗೂ ಖಾತಾ ಪತ್ರಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಯಿತು.

ಜಿಲ್ಲಾಧಿಕಾರಿ ಡಾ. ಕುಮಾರ್‌, ತಹಶೀಲ್ದಾರ್ ಆದರ್ಶ್‌ ಸಹಿತ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande