ಬಳ್ಳಾರಿ, 21 ಜುಲೈ (ಹಿ.ಸ.) :
ಆ್ಯಂಕರ್ : ಆಗಸ್ಟ್ 15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರದಲ್ಲಿ ಆಚರಣೆ ಕುರಿತಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಜುಲೈ 23 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.
ಸಭೆಗೆ ಯಾವುದೇ ಪ್ರತಿನಿಧಿಯನ್ನು ನಿಯೋಜಿಸದೇ ಜಿಲ್ಲಾ ಮಟ್ಟದ ಅಧಿಕಾರಿಗಳು ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಹಾಜರಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್