ಕುರುಗೋಡು, 21 ಜುಲೈ (ಹಿ.ಸ.) :
ಆ್ಯಂಕರ್ : ಕುರುಗೋಡು ತಾಲ್ಲೂಕಿನ ಕೋಳೂರು ಹಾಗೂ ಓರ್ವಾಯಿ ಗ್ರಾಮ ಪಂಚಾಯತಿ ಕಚೇರಿಗಳಿಗೆ ಕೇಂದ್ರ ಮಾನಿಟರಿಂಗ್ (ಎನ್ಎಲ್ಎಂ) ಅಧಿಕಾರಿಗಳಾದ ಡಾ. ದಯಾಕರ ರೆಡ್ಡಿ ಹಾಗೂ ಚೂಡಾಮಣಿ ರೆಡ್ಡಿ ತಂಡವು ಭೇಟಿ ನೀಡಿ ವಿವಿಧ ಕಾಮಗಾರಿ ಮತ್ತು ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಕೋಳೂರು ಗ್ರಾಪಂ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯಡಿ ಕಳೆದ 3 ವರ್ಷಗಳಲ್ಲಿ ಗ್ರಾಮ ಪಂಚಾಯತಿ ಕಟ್ಟಡ, ಎನ್ಆರ್ಎಲ್ಎನ್ ಶೆಡ್, ಮೆಟಲ್ ರಸ್ತೆ, ದನಗಳ ಶೆಡ್ಗಳ ಕಾಮಗಾರಿಗಳನ್ನು ನಡೆಸಿದ್ದು, ಗುಣಮಟ್ಟವನ್ನು ಪರಿಶೀಲಿಸಿದರು.
ಪ್ರಧಾನಮಂತ್ರಿ ಅವಾಜ್ ಯೋಜನೆಯಡಿ ನಿರ್ಮಾಣ ಹಂತದ ಮನೆಗಳು, ಮನರೇಗಾ ಯೋಜನೆಯಡಿ ಕಾಲುವೆ ಹೂಳು ತೆಗೆಯುವ ಕಾಮಗಾರಿ, ಸಾಮಾಜಿಕ ಅರಣ್ಯ ವಲಯದ ಮನರೇಗಾ ಯೋಜನೆಯಡಿ ಕಳೆದ ವರ್ಷ ಪೂರ್ಣಗೊಂಡ ಕಾಮಗಾರಿ, ತೋಟಗಾರಿಕೆ ಇಲಾಖೆಯ ಮನರೇಗಾ ಯೋಜನೆಯಡಿ ವೈಯಕ್ತಿಕ ದಾಳಿಂಬೆ ಕಾಮಗಾರಿ, ಪ್ರಧಾನ ಮಂತ್ರಿ ಸಡಕ್ ಯೋಜನೆಯಡಿ ಮದಿರೆ ಗ್ರಾಮದಿಂದ ವದ್ದಟ್ಟಿ ಗ್ರಾಮದವರೆಗೆ ಮುಖ್ಯ ರಸ್ತೆಯವರೆಗೆ ನಿರ್ಮಾಣ ಮಾಡಲಾಗಿರುವ ಡಾಂಬಾರ್ ರಸ್ತೆಗಳು ಸೇರಿದಂತೆ ಮನರೇಗಾ ಯೋಜನೆಯಡಿ 7 ವಹಿ ಹಾಗೂ ಇನ್ನೀತರ ಸ್ಥಳಗಳನ್ನು ಪರಿಶೀಲಿಸಿದರು.
ಬಳಿಕ ಕೂಲಿಕಾರರು ಮತ್ತು ಫಲಾನುಭವಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ವಿಶೇಷ ಚೇತನರು, ವೃದ್ಧರು ಹಾಗೂ ವಿಧವೆಯರ ಪಿಂಚಣಿ ಕುರಿತು ಫಲಾನುಭವಿಗಳ ಜೊತೆ ಮಾತನಾಡಿದರು.
ಕುರುಗೋಡು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ವಿ. ನಿರ್ಮಲ, ತಾಪಂ ಸಹಾಯಕ ನಿರ್ದೇಶಕ ಪಿ. ಶಿವರಾಮರೆಡ್ಡಿ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಜುಭೇದ, ತಿಮ್ಮಪ್ಪ, ಗ್ರಾಮ ಲೆಕ್ಕಾಧಿಕಾರಿ ಮಾರುತಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳಾದ ರಾಘವೇಂದ್ರ, ಕಿರಣ್, ಸಾಮಾಜಿಕ ಅರಣ್ಯ ಅಧಿಕಾರಿ ಸಿರಾ ಬಡೀಗಿ, ಕುರುಗೋಡು ತಾಪಂ ತಾಂತ್ರಿಕ ಐಇಸಿ ಸಂಯೋಜಕ ಚಂದ್ರಶೇಖರ, ತಾಂತ್ರಿಕ ಸಹಾಯಕರಾದ ಯರ್ರಿ ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್