ವೈಷ್ಣೋದೇವಿ ಯಾತ್ರಾಮಾರ್ಗದಲ್ಲಿ ಭೂಕುಸಿತ – ನಾಲ್ವರಿಗೆ ಗಾಯ
ಶ್ರೀನಗರ, 21 ಜುಲೈ (ಹಿ.ಸ.): ಆ್ಯಂಕರ್: ಜಮ್ಮು ಮತ್ತು ಕಾಶ್ಮೀರದ ಕತ್ರಾದ ವೈಷ್ಣೋದೇವಿ ಯಾತ್ರಾಮಾರ್ಗದಲ್ಲಿ ಭಾರೀ ಮಳೆಗೆ ಭೂಕುಸಿತ ಉಂಟಾಗಿ ನಾಲ್ವರು ಯಾತ್ರಾರ್ಥಿಗಳು ಗಾಯಗೊಂಡಿದ್ದಾರೆ. ಯಾತ್ರೆಯ ಪ್ರಾರಂಭಿಕ ಬಂಗಂಗಾ ಪ್ರದೇಶದ ಬಳಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಭೂಕುಸಿತ ಸಂಭವಿಸಿದ್ದು, ಹಲವಾರು ಯ
ವೈಷ್ಣೋದೇವಿ ಯಾತ್ರಾಮಾರ್ಗದಲ್ಲಿ ಭೂಕುಸಿತ – ನಾಲ್ವರಿಗೆ ಗಾಯ


ಶ್ರೀನಗರ, 21 ಜುಲೈ (ಹಿ.ಸ.):

ಆ್ಯಂಕರ್:

ಜಮ್ಮು ಮತ್ತು ಕಾಶ್ಮೀರದ ಕತ್ರಾದ ವೈಷ್ಣೋದೇವಿ ಯಾತ್ರಾಮಾರ್ಗದಲ್ಲಿ ಭಾರೀ ಮಳೆಗೆ ಭೂಕುಸಿತ ಉಂಟಾಗಿ ನಾಲ್ವರು ಯಾತ್ರಾರ್ಥಿಗಳು ಗಾಯಗೊಂಡಿದ್ದಾರೆ.

ಯಾತ್ರೆಯ ಪ್ರಾರಂಭಿಕ ಬಂಗಂಗಾ ಪ್ರದೇಶದ ಬಳಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಭೂಕುಸಿತ ಸಂಭವಿಸಿದ್ದು, ಹಲವಾರು ಯಾತ್ರಿಕರು ಮಣ್ಣಿನ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ.

ಪ್ರಸ್ತುತ ರಕ್ಷಣಾ ಕಾರ್ಯಚರಣೆ ನಡೆಯುತ್ತಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಿರಂತರ ಮಳೆಯಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡಚಣೆ ಉಂಟಾಗುತ್ತಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande