ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನ
ಕೊಪ್ಪಳ, 22 ಜುಲೈ (ಹಿ.ಸ.) : ಆ್ಯಂಕರ್ : ಕೃಷಿ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ ಕೊಪ್ಪಳ ತಾಲೂಕಿನ ರೈತ ಭಾಂದವರು ಪ್ರಧಾನಮಂತ್ರಿ
ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನ


ಕೊಪ್ಪಳ, 22 ಜುಲೈ (ಹಿ.ಸ.) :

ಆ್ಯಂಕರ್ : ಕೃಷಿ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ

ಕೊಪ್ಪಳ ತಾಲೂಕಿನ ರೈತ ಭಾಂದವರು ಪ್ರಧಾನಮಂತ್ರಿ ಕೃಷಿ ಸಿಂಚಾಯ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗಾಗಿ ಅರ್ಜಿ ಸಲ್ಲಿಸಿ, ಯೋಜನೆಯ ಸದಪಯೋಗ ಪಡೆದುಕೊಳ್ಳಬೇಕು. ಅರ್ಜಿ ನಮೂನೆ, ಆಧಾರ ಕಾರ್ಡ, ನೀರಾವರಿ ಪ್ರಮಾಣ ಪತ್ರ, ಪಹಣಿ, ಪರಿಶಿಷ್ಟ ಜಾತಿ ಮತ್ತು ಪರಿಷ್ಟ ಪಂಗಡದವರಿದ್ದಲ್ಲಿ ಜಾತಿ ಪ್ರಮಾಣ ಪತ್ರ, ನೋಟ್ರಿಯೊಂದಿಗೆ ರೂ. 20 ಛಾಪಕಾಖದ (ಬಾಂಡ್), ಬ್ಯಾಂಕ ಪಾಸ್ ಬುಕ್ ಹಾಗೂ ಆರ್.ಟಿ.ಜಿ.ಎಸ್. ಪತ್ರ, ಈ ಎಲ್ಲಾ ಅಗತ್ಯ ದಾಖಲಾತಿಗಳೊಂದಿಗೆ ರೈತ ಸಂಪರ್ಕ ಕೇಂದ್ರಗಳ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವಂತೆ ಹಾಗೂ ರೈತರು ಕಡ್ಡಾಯವಾಗಿ ಎಫ್.ಐ.ಡಿ.ಯನ್ನು ಹೊಂದಿರಬೇಕಾಗಿದ್ದು, ರೈತರು ಈಗಾಗಲೇ ಎಫ್.ಐ.ಡಿ.ಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಪಹಣಿಗಳನ್ನು ಎಫ್.ಐ.ಡಿ.ಗೆ ಜೋಡಣೆ ಮಾಡಿಕೊಳ್ಳಬೇಕು ಎಂದರು.

.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande