ಬೆಂಗಳೂರು, 23 ಜುಲೈ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ 24ರಂದು ನವದೆಹಲಿಗೆ ತೆರಳಲಿದ್ದಾರೆ.
ಜುಲೈ 25ರಂದು ನಡೆಯಲಿರುವ 'ಭಾಗಿದಾರಿ ನ್ಯಾಯ ಸಮ್ಮೇಳನ'ದಲ್ಲಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮವನ್ನು ಎಐಸಿಸಿ ಹಿಂದುಳಿದ ವರ್ಗಗಳ ಘಟಕ ಆಯೋಜಿಸಿದ್ದು, ತಲ್ಕಟೋರಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಸಮ್ಮೇಳನದ ನಂತರ ಮುಖ್ಯಮಂತ್ರಿ ಅವರು ಕೇಂದ್ರ ಮಂತ್ರಿಗಳನ್ನು ಭೇಟಿ ಮಾಡಿ ನಾನಾ ಯೋಜನೆಗಳ ಕುರಿತು ಚರ್ಚಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa