ಹಾಲು ಉತ್ಪಾದಕರ ಸಂಘದ ವಾಣಿಜ್ಯ ಮಳಿಗೆಗಳ ಉದ್ಘಾಟನೆ
ಹಾಲು ಉತ್ಪಾದಕರ ಸಂಘದ ವಾಣಿಜ್ಯ ಮಳಿಗೆಗಳ ಉದ್ಘಾಟನೆ
ಕೋಲಾರ ತಾಲ್ಲೂಕಿನ ವೇಮಗಲ್ ಹಾಲು ಉತ್ಪಾದಕರ ಸಹಕಾರ ಸಂಘದ ವಾಣಿಜ್ಯ ಮಳಿಗೆಗಳನ್ನು ಶಾಸಕ ಕೊತ್ತೂರು ಮಂಜುನಾಥ್ ಉದ್ಘಾಟಿಸಿದರು.


ಕೋಲಾರ, ೨೭ ಜುಲೈ (ಹಿ.ಸ) :

ಆ್ಯಂಕರ್ : ಮುಂದೊ0ದು ದಿನ ರೈತರ ಕಾಲು ಹಿಡಿಯುವ ಪರಿಸ್ಥಿತಿ ಜನರಿಗೆ ಮತ್ತು ಸರ್ಕಾರಕ್ಕೆ ಬರಲಿದೆ ರೈತರಿಂದಲ್ಲೇ ಜೀವನ ಮುಖ್ಯವಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ಕೋಲಾರ ತಾಲೂಕಿನ ವೇಮಗಲ್ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹಾಗೂ ವಾಣಿಜ್ಯ ಮಳಿಗೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಇವತ್ತು ರೈತನ ಮಗ ರೈತನಾಗುತ್ತಿಲ್ಲ ರೈತರು ಎಂದರೆ ಸಮಾಜದಲ್ಲಿ ತಾರತಮ್ಯ ನಡೆಯುತ್ತಿದೆ. ರೈತರಿಂದಲ್ಲೇ ಜೀವನ ಎಂಬುದನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು ಜೊತೆಗೆ ರೈತರ ಕಷ್ಟವನ್ನು ಯುವ ಪೀಳಿಗೆಗೆ ತಿಳಿವಳಿಕೆ ನೀಡಬೇಕು ಎಂದು ತಿಳಿಸಿದರು.

ಯಾವುದೇ ಸಹಕಾರಿ ಸಂಸ್ಥೆಯನ್ನು ನ್ಯಾಯ ನೀತಿ ಧರ್ಮದಿಂದ ಅಭಿವೃದ್ಧಿ ಪಡಿಸಬೇಕು ದೇಶಕ್ಕೆ ಜನರಿಗೆ ಉತ್ತರ ಆರೋಗ್ಯ , ಶಿಕ್ಷಣದ ಜೊತೆಗೆ ಕೃಷಿಯನ್ನು ಪೋತ್ಸಾಹ ನೀಡಬೇಕು ಹಾಲು ಉತ್ಪಾದಕರು ಸಹ ಉತ್ತಮ ಗುಣಮಟ್ಟದ ಹಾಲು ಸರಬರಾಜು ಮಾಡುವ ಮೂಲಕ ಸಂಘದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಮಾಲೂರು ಶಾಸಕ ಹಾಗೂ ಕೋಮುಲ್ ಅಧ್ಯಕ್ಷ ಕೆ.ವೈ ನಂಜೇಗೌಡ ಮಾತನಾಡಿ ದೇಶದಲ್ಲಿ ಮೊದಲ ಬಾರಿಗೆ ಕೋಮುಲ್ ನೇತೃತ್ವದಲ್ಲಿ ೧೨ ಮೆಗಾ ವ್ಯಾಟ್ ಸೋಲಾರ್ ವಿದ್ಯುತ್ ಘಟಕ ಪ್ರಾರಂಭಿಸಿದ್ದು ಇದರಿಂದಾಗಿ ತಿಂಗಳಿಗೆ ಎರಡು ಕೋಟಿ ವಿದ್ಯುತ್ ಶುಲ್ಕ ಉಳಿಯಲಿದೆ ಈ ಹಣವನ್ನು ಜಿಲ್ಲೆಯಲ್ಲಿರುವ ಬಿಎಂಸಿ ಕೇಂದ್ರಗಳಿಗೆ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ೫೦% ವಿದ್ಯುತ್ ಶುಲ್ಕ ಬರಿಸಲು ಮುಂದಿನ ಆಡಳಿತ ಮಂಡಳಿಯಲ್ಲಿ ತೀರ್ಮಾನಿಸಲಾಗುತ್ತದೆ ಸಂಘಗಳ ಅಭಿವೃದ್ಧಿ ಆಡಳಿತ ಮಂಡಳಿ ಬದ್ದವಾಗಿದೆ ಎಂದರು.

ಕೋಚಿಮುಲ್ ವಿಭಜನೆಯ ನಂತರ ಇತಿಹಾಸದ ಪುಟಗಳಲ್ಲಿ ದಾಖಲಾಗುವಂತಹ ಕಾರ್ಯಕ್ರಮಗಳನ್ನು ಹಾಗೂ ಯೋಜನೆಗಳನ್ನು ರೂಪಿಸಲಾಗುತ್ತಿದೆ ಸುಮಾರು ೨೨೦ ಕೋಟಿ ವೆಚ್ಚದಲ್ಲಿ ಎಂವಿಕೆ ಡೇರಿ, ಹಾಲು ಉತ್ಪಾದಕರ ಮಕ್ಕಳಿಗೆ ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಪಡೆಯಲು ಹಾಸ್ಟೆಲ್ ಸೌಲಭ್ಯ ಒದಗಿಸಲಾಗಿದೆ ವರ್ಷದಲ್ಲಿ ಮೂರು ಬಾರಿ ರಾಸುಗಳಿಗೆ ವಿಮೆ ಸೌಲಭ್ಯ ಪ್ರತಿಯೊಂದು ಹಳ್ಳಿಯಲ್ಲಿ ಸಂಘ ಮಾಡಿ ಮುಂದಿನ ವರ್ಷದೊಳಗೆ ಕನಿಷ್ಠ ೧೦ ಲಕ್ಷ ಲೀಟರ್ ಹಾಲು ಉತ್ಪಾದನೆಯ ಗುರಿಯಿದೆ ಎಂದು ತಿಳಿಸಿದರು.

ಕೋಮುಲ್ ನಿರ್ದೇಶಕ ಚಂಜಿಮಲೆ ಬಿ ರಮೇಶ್ ಮಾತನಾಡಿ ಸಹಕಾರಿ ಸಂಘಗಳಲ್ಲಿ ರಾಜಕೀಯ ಮಾಡಿದರೆ ಯಾರು ಉದ್ದಾರವಾಗಲ್ಲ ರೈತರನ್ನು ಪೋತ್ಸಾಹಿಸಬೇಕು ಗುಣಮಟ್ಟದ ಹಾಲು ನೀಡುವ ಮೂಲಕ ಸಂಘದ ಬೆಳವಣಿಗೆಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದರು.

ಎAಎಲ್ಸಿ ಎಂ ಎಲ್ ಅನಿಲ್ ಕುಮಾರ್ ಮಾತನಾಡಿದರು ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ಕೋಮುಲ್ ನಿರ್ದೇಶಕ ಷಂಷೀರ್, ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ, ಉಪ ವ್ಯವಸ್ಥಾಪಕ ಡಾ ಮಹೇಶ್, ವೇಮಗಲ್ ಡೇರಿ ಅಧ್ಯಕ್ಷ ವಿ.ಎಂ ಶ್ರೀನಿವಾಸ್, ವಿಸ್ತರಣಾಧಿಕಾರಿಗಳಾದ ಸಮೀರ್ ಪಾಷ, ಅಶ್ವಕ್ ಅಹಮದ್, ಮುಖಂಡರಾದ ವೈ ಶಿವಕುಮಾರ್, ವಿ.ಎಂ ಮುನಿಯಪ್ಪ, ಖಾಜಿಕಲ್ಲಹಳ್ಳಿ ಮುನಿರಾಜು, ಮಂಜುನಾಥ್, ನಾಗರಾಜ್, ಕಾಂತರಾಜ್, ಮುನಿಯಪ್ಪ, ವೆಂಕಟಾಚಲ, ಡೇರಿ ಉಪಾಧ್ಯಕ್ಷ ನಾರಾಯಣಸ್ವಾಮಿ, ಕಾರ್ಯದರ್ಶಿ ಸಂಜಯ್ ಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಚಿತ್ರ ; ಕೋಲಾರ ತಾಲ್ಲೂಕಿನ ವೇಮಗಲ್ ಹಾಲು ಉತ್ಪಾದಕರ ಸಹಕಾರ ಸಂಘದ ವಾಣಿಜ್ಯ ಮಳಿಗೆಗಳನ್ನು ಶಾಸಕ ಕೊತ್ತೂರು ಮಂಜುನಾಥ್ ಉದ್ಘಾಟಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande