ಹರಿದ್ವಾರ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ : ಆರು ಭಕ್ತರ ದುರ್ಮರಣ
ಹರಿದ್ವಾರ, 27 ಜುಲೈ (ಹಿ.ಸ.) : ಆ್ಯಂಕರ್ : ಉತ್ತರಾಖಂಡದ ಹರಿದ್ವಾರದ ಪ್ರಸಿದ್ಧ ಮಾನಸ ದೇವಿ ಸಿದ್ಧಪೀಠದ ಮೆಟ್ಟಿಲುಗಳಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಆರು ಜನ ಭಕ್ತರು ಮೃತಪಟ್ಟಿದ್ದು, 25 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ದೇವಾಲಯದಲ್ಲಿ ಭಕ್ತರ ಭಾರೀ ಸಂಖ್ಯೆಯಲ್ಲಿ ನೆರೆದಿದ
Stamped


ಹರಿದ್ವಾರ, 27 ಜುಲೈ (ಹಿ.ಸ.) :

ಆ್ಯಂಕರ್ : ಉತ್ತರಾಖಂಡದ ಹರಿದ್ವಾರದ ಪ್ರಸಿದ್ಧ ಮಾನಸ ದೇವಿ ಸಿದ್ಧಪೀಠದ ಮೆಟ್ಟಿಲುಗಳಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಆರು ಜನ ಭಕ್ತರು ಮೃತಪಟ್ಟಿದ್ದು, 25 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ದೇವಾಲಯದಲ್ಲಿ ಭಕ್ತರ ಭಾರೀ ಸಂಖ್ಯೆಯಲ್ಲಿ ನೆರೆದಿದ್ದು, ಅವ್ಯವಸ್ಥೆಯಿಂದ ಕಾಲ್ತುಳಿತ ಉಂಟಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ಕೊತ್ವಾಲಿ ನಗರ ಉಸ್ತುವಾರಿ ರಿತೇಶ್ ಶಾ ಅವರು ಈ ಕಾಲ್ತುಳಿತದಲ್ಲಿ ಕೇವಲ ಇಬ್ಬರು ಮೃತಪಟ್ಟಿದ್ದಾರೆ ಎಂಬುದನ್ನು ಪರಿಶೀಲಿಸಿ ದೃಢಪಡಿಸಿದ್ದೇವೆ ಎಂದು ಹೇಳಿದ್ದಾರೆ. ಘಟನೆಗೆ ನಿಖರವಾದ ಕಾರಣ ಇನ್ನೂ ಬಹಿರಂಗವಾಗಿಲ್ಲ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande