ಐತಿಹಾಸಿಕ ಮುಚಖಂಡಿ ಕೆರೆ ಅಭಿವೃದ್ದಿಗೆ ಕ್ರಮ : ಡಿಸಿ ಸಂಗಪ್ಪ
ವಿಜಯಪುರ, 28 ಜುಲೈ (ಹಿ.ಸ.) : ಆ್ಯಂಕರ್: ಬಾಗಲಕೋಟೆಯ ಐತಿಹಾಸಿಕ ಮುಚಖಂಡಿ ಕೆರೆ ಅಭಿವೃದ್ದಿ, ಸಂರಕ್ಷಣೆ, ಹಾಗೂ ಪರಂಪೋಕು (ಬಿ-ಖರಾಬ) ಜಮೀನಿನಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಕಾರ್ಯವಾಗಬೇಕೆಂದು ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಮುಖಂಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಚ
ಕೆರೆ


ವಿಜಯಪುರ, 28 ಜುಲೈ (ಹಿ.ಸ.) :

ಆ್ಯಂಕರ್: ಬಾಗಲಕೋಟೆಯ ಐತಿಹಾಸಿಕ ಮುಚಖಂಡಿ ಕೆರೆ ಅಭಿವೃದ್ದಿ, ಸಂರಕ್ಷಣೆ, ಹಾಗೂ ಪರಂಪೋಕು (ಬಿ-ಖರಾಬ) ಜಮೀನಿನಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಕಾರ್ಯವಾಗಬೇಕೆಂದು ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಮುಖಂಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಚಖಂಡಿ ಕೆರೆ ವೀಕ್ಷಣೆ ಮಾಡಿ ಮಾತನಾಡಿದ ಅವರು ಕೆರೆಯ ಸುತ್ತ ಮುತ್ತಲಿನ 100 ಎಕರೆ ಪರಂಪೆÇೀಕು ಜಮೀನಿನಲ್ಲಿ ಹೊಸದಾಗಿ ಸಸಿಗಳನ್ನು ನೆಡುವಂತೆ ಹಾಗೂ ಬೇಸಿಗೆ ಕಾಲದಲ್ಲಿ ಅವುಗಳು ಒಣಗದಂತೆ ಅಗತ್ಯ ಕ್ರಮ ವಹಿಸಲು ಅರಣ್ಯ, ಸಣ್ಣ ನೀರಾವರಿ ಮತ್ತು ಅಂತರಜಲ ಅಭಿವೃದ್ಧಿ ಇಲಾಖೆ ಹಾಗೂ ಬಾಗಲಕೋಟೆ ನಗರಾಭಿವೃದ್ದ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಚಖಂಡಿ ಕೆರೆಗೆ ಹೊಂದಿಕೊಂಡಿರುವ ಬೆಟ್ಟಗಳಲ್ಲಿ ತೀವ್ರವಾಗಿ ಹೆಚ್ಚಿರುವ ಅರಣ್ಯನಾಶದಿಂದಾಗಿ ಮಣ್ಣಿನ ಸವೆತ, ಕೆರೆಯಲ್ಲಿ ಹೂಳು ತುಂಬುವಿಕೆ, ಮತ್ತು ನೀರಿನ ಮಟ್ಟ ಕುಸಿಯುವಿಕೆ ಉಂಟಾಗಿದೆ. ಈ ಪ್ರದೇಶದಲ್ಲಿ ಸ್ಥಳೀಯ ಸಸ್ಯ ಪ್ರಭೇದಗಳನ್ನು ನೆಡುವುದರಿಂದ ಮಣ್ಣಿನ ಸವೆತವನ್ನು ತಡೆಯಬಹುದಾಗಿದೆ. ಅಂತರ್ಜಲ ಮರುಪೂರಣವನ್ನು ಹೆಚ್ಚಿಸಬೇಕು. ಜೈವಿಕ ವೈವಿಧ್ಯತೆಯನ್ನು ಪುನಃ ಸ್ಥಾಪಿಸಬೇಕಿದೆ ಈ ನಿಟ್ಟಿನಲ್ಲಿ ಗ್ರಾಮಸ್ಥರು, ಪರಿಸರ ಸಂಘಟನೆಗಳು ಮತ್ತು ಸ್ವಯಂಸೇವಕರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಕೆರೆಯಲ್ಲಿನ ಹೂಳು, ಕಸ, ಗಿಡ-ಗಂಟಿ ಹಾಗೂ ಪ್ಲಾಸ್ಟೀಕ ತ್ಯಾಜ್ಯಗಳನ್ನು ವಿಲೇವಾರಿ ಮಾಡಿ, ಕೆರೆಯನ್ನು ಸ್ವಚ್ಛಗೊಳಿಸಲು ತಿಳಿಸಿದರಲ್ಲದೇ ಕೆರೆ ತುಂಬುವ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಹಾಯಕ ಅಭಿಯಂತರರು ಸಣ್ಣ ನೀರಾವರಿ ಅಂತರಜಲ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಈಗಾಗಲೇ ಐತಿಹಾಸಿಕ ಕೆರೆಯ ಎದುರುಗಡೆ ನಿರ್ಮಿಸಲಾಗಿರುವ ಉದ್ಯಾನವನವನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಉದ್ಯಾನವನದಲ್ಲಿನ ಕಸ, ತ್ಯಾಜ್ಯ ವಸ್ತುಗಳನ್ನು ವಿಲೇವಾರಿ ಮಾಡಿ ಆವರಣವನ್ನು ಶುಚಿಯಾಗಿಡಬೇಕು. ಕೈದೋಟದಲ್ಲಿ ಸಸಿಗಳನ್ನು ಕಾಲಕಾಲಕ್ಕೆ ಕಟಾವು ಮಾಡಿ, ನೀರುಣಿಸುವ ಕಾರ್ಯವಾಗಬೇಕೆಂದು ಸೂಚಿಸಿದರು.

ಭೇಟಿ ಸಂದರ್ಭದಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರುಥ್ರೆನ್, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ್, ಭೂ ದಾಖಲೆಗಳ ಉಪನಿರ್ದೇಶಕ ರವಿಕುಮಾರ ಎಂ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಷಣ್ಮುಕ ಡಿ.ಎಚ್, ಸಣ್ಣ ನೀರಾವರಿ ಮತ್ತು ಅಂತರಜಲ ಅಭಿವೃದ್ಧಿ ಇಲಾಖೆ ಸಹಾಯಕ ಅಭಿಯಂತರ ಪ್ರಕಾಶ ನಾಯಿಕ, ಹಿರಿಯ ಭೂ ವಿಜ್ಞಾನಿ ಮಹೇಶ ಬಿರಾಜನವರ, ತಹಶೀಲದಾರ ವಾಸುದೇವ ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande