ಬಳ್ಳಾರಿ, 28 ಜುಲೈ (ಹಿ.ಸ.) :
ಆ್ಯಂಕರ್ : ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ) ಕ್ಕೆ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಕೃಷ್ಣ ಬಾಜಪೇಯಿ (ಐಎಎಸ್) ಅವರು ನೇಮಕಗೊಂಡಿದ್ದು, ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.
ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರವೀಂದ್ರ ಕರಲಿಂಗಣ್ಣವರ್ (ಕೆಎಎಸ್) ಅವರು ವರ್ಗಾವಣೆಗೊಂಡಿದ್ದು, ಈ ಸ್ಥಾನಕ್ಕೆ ಕೃಷ್ಣ ಬಾಜಪೇಯಿ ಅವರನ್ನು ನೇಮಕ ಮಾಡಲಾಗಿದೆ. ಕೃಷ್ಣ ಬಾಜಪೇಯಿ ಅವರು ಈ ಹಿಂದೆ ಕಲಬುರಗಿ ಪ್ರಾದೇಶಿಕ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್