ಆರೋಗ್ಯವಾಗಿರಲು ಶುದ್ಧ ನೀರನ್ನೇ ಕುಡಿಯಿರಿ : ಡಾ. ಯಲ್ಲಾ ರಮೇಶ್ ಬಾಬು
ಬಳ್ಳಾರಿ, 29 ಜುಲೈ (ಹಿ.ಸ.) : ಆ್ಯಂಕರ್ : ಆರೋಗ್ಯವಾಗಿರಲು ಶುದ್ಧ ನೀರನ್ನು ಕುಡಿಯಬೇಕು. ಯಾವುದೇ ಕಾರಣಕ್ಕೂ ನದಿಯಲ್ಲಿನ ನೀರನ್ನು ಕುಡಿಯಲು ಬಳಸಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್‍ಬಾಬು ಅವರು ಹೇಳಿದ್ದಾರೆ. ತುಂಗಭದ್ರಾ ಜಲಾಶಯದಿಂದ ನದಿಗೆ ಹೆಚ್ಚುವರ
ಆರೋಗ್ಯವಾಗಿರಲು ಶುದ್ಧ ನೀರನ್ನೇ ಕುಡಿಯಿರಿ: ಡಾ. ಯಲ್ಲಾ ರಮೇಶ್ ಬಾಬು


ಆರೋಗ್ಯವಾಗಿರಲು ಶುದ್ಧ ನೀರನ್ನೇ ಕುಡಿಯಿರಿ: ಡಾ. ಯಲ್ಲಾ ರಮೇಶ್ ಬಾಬು


ಬಳ್ಳಾರಿ, 29 ಜುಲೈ (ಹಿ.ಸ.) :

ಆ್ಯಂಕರ್ : ಆರೋಗ್ಯವಾಗಿರಲು ಶುದ್ಧ ನೀರನ್ನು ಕುಡಿಯಬೇಕು. ಯಾವುದೇ ಕಾರಣಕ್ಕೂ ನದಿಯಲ್ಲಿನ ನೀರನ್ನು ಕುಡಿಯಲು ಬಳಸಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್‍ಬಾಬು ಅವರು ಹೇಳಿದ್ದಾರೆ.

ತುಂಗಭದ್ರಾ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಸಿರುಗುಪ್ಪ ತಾಲೂಕಿನ ಹಚೋಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಒಳಪಡುವ ಚಿಕ್ಕಬಳ್ಳಾರಿ, ಹಳೆ ಶ್ರೀಧರಗಡ್ಡೆ ಹಾಗೂ ಹಚ್ಚೋಳಿ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿ ಮಾತನಾಡಿದರು.

ನದಿಯ ನೀರು ಕುಡಿಯುವುದರಿಂದ ವಾಂತಿ-ಭೇದಿ, ಶೀತ ಜ್ವರ ಹಾಗೂ ಬ್ಯಾಕ್ಟೀರಿಯಾ ಸೋಂಕಿನ ಕಾಯಿಲೆಗಳು ಬರುವ ಸಾಧ್ಯತೆ ಇರುತ್ತದೆ. ನೀರಿನ ಹರಿಯುವ ಮಟ್ಟ ಹೆಚ್ಚಾಗಿ ಹಾವು, ಚೇಳು ಇತರೆ ವಿಷ ಜಂತುಗಳು ಜನವಾಸ ಪ್ರದೇಶಕ್ಕೆ ಬರುವ ಸಂಭವವಿದೆ. ನೀರಿನ ಹರಿವಿನಿಂದ ಅಪಾಯ ಸಂಭವಿಸುವ ಸಂದರ್ಭದಲ್ಲಿ ಸುರಕ್ಷಿತೆಗಾಗಿ ಎತ್ತರದ ಪ್ರದೇಶಗಳನ್ನು ಆಯ್ದುಕೊಳ್ಳಿ ಎಂದು ಗ್ರಾಮದ ಜನರಿಗೆ ಹೇಳಿದರು.

ಬಳಿಕ ಹಚ್ಚೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಾಲ್ಲೂಕು ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ, ನದಿ ಪಾತ್ರದ ಪ್ರದೇಶದ ಜನರಿಗೆ ಬೇಕಾಗುವಂತಹ ಔಷಧಿಗಳು, ಇಂಜೆಕ್ಷನ್‍ಗಳು, ಹಾವು ನಂಜು ನಿರೋಧಕ ಲಸಿಕೆಗಳು, ಓ.ಆರ್.ಎಸ್ ಪಾಕೆಟ್ಸ್, ನೆಗಡಿ ಕೆಮ್ಮು ಜ್ವರದ ಮಾತ್ರೆಗಳು, ಐ ವಿ ಫ್ಲೂಡ್‍ಗಳು, ಹ್ಯಾಲೋಜನ್ ಮಾತ್ರೆಗಳು, ಬ್ಲೀಚಿಂಗ್ ಪೌಡರ್ ಇತರೆ ಚಿಕಿತ್ಸಾ ಸೇವಾ ಸೌಲಭ್ಯಗಳು ಸಾಕಷ್ಟು ಪ್ರಮಾಣದಲ್ಲಿ ಮುಂಚೂಣಿಯಾಗಿ ಸಂಗ್ರಹಿಸಿ ಎಚ್ಚರಿಕೆ ವಹಿಸಬೇಕು ಹಾಗೂ ಅಪಾಯಕಾರಿ ಪ್ರದೇಶಗಳಲ್ಲಿನ ಜನಾರೋಗ್ಯ ಸಮೀಕ್ಷೆ ಪ್ರತಿದಿನ ನಡೆಸಲು ಮತ್ತು ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಸಮುದಾಯದಲ್ಲಿ ಗೃಹ ಆರೋಗ್ಯ ಕಾರ್ಯಕ್ರಮ, ಗರ್ಭಿಣಿ, ಗಂಡಾಂತರ ಗರ್ಭಿಣಿಯರ ಕಾಳಜಿ, ಸುಸೂತ್ರ ಹೆರಿಗೆ ಸೌಲಭ್ಯ, ತಾಯಿ ಮಗುವಿನ ಆರೈಕೆ ಕುರಿತಂತೆ ಆರೋಗ್ಯ ಪರ ಕ್ರಮಗಳನ್ನು ಅನುಸರಿಸಬೇಕು ಎಂದು ಸಿಬ್ಬಂದಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಮೇಲ್ವಿಚಾರಕ ಟಿ. ವಿರೂಪಾಕ್ಷಪ್ಪ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರವಿಕುಮಾರ್, ಪ್ರಾಥಮಿಕ ಸುರಕ್ಷತಾ ಅಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಶುಶ್ರೂಷಣಾಧಿಕಾರಿಗಳು ಸೇರಿದಂತೆ ಪ್ರಯೋಗಶಾಲ ತಂತ್ರಜ್ಞರು, ಔಷಧ ತಜ್ಞರು ಹಾಗೂ ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande