ಕೊಪ್ಪಳ, 29 ಜುಲೈ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಆಗಸ್ಟ್ 9 ರಂದು ನುಲಿಯ ಚಂದಯ್ಯ ಜಯಂತಿ ಮತ್ತು ಆ. 16 ರಂದು ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಸಿದ್ಧತೆಗಳನ್ನು ಕೈಗೊಳ್ಳಲು ಪೂರ್ವಭಾವಿ ಸಭೆಯನ್ನು ಆ. 1 ರಂದು ಬೆಳಿಗ್ಗೆ 10ಕ್ಕೆ ಮತ್ತು 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ವಹಿಸುವರು. ಜಿಲ್ಲಾ ಮಟ್ಟದ ಇಲಾಖೆಗಳ ಅಧಿಕಾರಿಗಳು ಸಭೆಗೆ ತಪ್ಪದೇ ಹಾಜರಾಗಬೇಕು ಹಾಗೂ ಸಮಾಜದ ಮುಖಂಡರು ಈ ಸಭೆಯಲ್ಲಿ ಆಗಮಿಸಿ ಅಗತ್ಯ ಸಲಹೆಗಳನ್ನು ನೀಡುವಂತೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್