ಗದಗ, 30 ಜುಲೈ (ಹಿ.ಸ.) :
ಆ್ಯಂಕರ್ : ರೈತರಿಗೆ ರಸಗೊಬ್ಬರ ಸಿಗದಂತೆ ಮಾಡುತ್ತಿರುವ ಕಾಂಗ್ರೇಸ್ ಸರ್ಕಾರದ ವಿರುದ್ದ ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ವತಿಯಿಂದ ನಾಳೆ ಬೆಳಿಗ್ಗೆ 10:30 ಗಂಟೆಗೆ ಗದಗ ನಗರದ ಗಾಂಧಿ ಸರ್ಕಲ್ನಲ್ಲಿ ಬಿಜೆಪಿ ಗದಗ ಜಿಲ್ಲಾಧ್ಯಕ್ಷರಾದ ತೋಟಪ್ಪ(ರಾಜು) ಕುರುಡಗಿ ಹಾಗು ನಗರದ ಬಿಜೆಪಿ ಎಲ್ಲ ಮುಖಂಡರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವದು.
ಕಾರಣ ಗದಗ ವಿಧಾನಸಭಾ ಕ್ಷೇತ್ರದ ಸಮಸ್ತ ರೈತ ಬಾಂಧವರು ಹಾಗು ಪಕ್ಷದ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರು ಆಗಮಿಸಬೇಕೆಂದು ಗದಗ ನಗರ ಮಂಡಲ ಅಧ್ಯಕ್ಷ ಸುರೇಶ ಮರಳಪ್ಪನವರ, ಗ್ರಾಮೀಣ ಅಧ್ಯಕ್ಷ ಬೂದಪ್ಪ ಹಳ್ಳಿ, ರೈತ ಮೋರ್ಚಾ ಮಂಡಲ ಅಧ್ಯಕ್ಷರುಗಳಾದ ಶಂಕರ ಕರಿಬಿಷ್ಠಿ, ಸಿದ್ದಪ್ಪ ಜೊಂಡಿ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP