ಶಿಕ್ಷಕರ ಆನ್ ಲೈನ್ ಹಾಜರಾತಿ ಪ್ರತ್ಯಕ್ಷ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಚಾಲನೆ
ಗದಗ, 08 ಜುಲೈ (ಹಿ.ಸ.) : ಆ್ಯಂಕರ್ : ಮುಂದಿನ ಒಂದು ತಿಂಗಳೊಳಗಾಗಿ ಶಾಲಾ ಮಕ್ಕಳ ಫೇಸ್ ರಿಡಿಂಗ್ ಹಾಜರಾತಿ ಪ್ರಕ್ರಿಯೆಗೆ ರಾಜ್ಯದಲ್ಲಿ ಚಾಲನೆ ನೀಡಲಾಗುವುದು ಎಂದು ಸಚಿವ ಎಸ್ ಮಧು ಬಂಗಾರಪ್ಪ ಅವರು ಹೇಳಿದರು. ಗದಗ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ, ಸಾಕ್ಷರತಾ
ಪೋಟೋ


ಗದಗ, 08 ಜುಲೈ (ಹಿ.ಸ.) :

ಆ್ಯಂಕರ್ : ಮುಂದಿನ ಒಂದು ತಿಂಗಳೊಳಗಾಗಿ ಶಾಲಾ ಮಕ್ಕಳ ಫೇಸ್ ರಿಡಿಂಗ್ ಹಾಜರಾತಿ ಪ್ರಕ್ರಿಯೆಗೆ ರಾಜ್ಯದಲ್ಲಿ ಚಾಲನೆ ನೀಡಲಾಗುವುದು ಎಂದು ಸಚಿವ ಎಸ್ ಮಧು ಬಂಗಾರಪ್ಪ ಅವರು ಹೇಳಿದರು.

ಗದಗ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾದ ಶಿಕ್ಷಕರ ಫೇಸ್ ರಿಡಿಂಗ್ ಆನ್ ಲೈನ್ ಹಾಜರಾತಿ ಪ್ರತ್ಯಕ್ಷ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಚಿವರು ಮಾತನಾಡಿದರು.

ಸರ್ಕಾರಿ ಶಾಲಾ ಶಿಕ್ಷಕರ ಆನ್ ಲೈನ್ ಹಾಜರಾತಿ ಅಗತ್ಯವಿದ್ದು, ಇದೇ ಪ್ರಕ್ರಿಯೆಯನ್ನು ರಾಜ್ಯಾದ್ಯಂತ ಕೈಗೊಳ್ಳಲು ಹಿರಿಯ ಸಚಿವರಾದ ಎಚ್.ಕೆ. ಪಾಟೀಲ ಅವರ ಸಹಕಾರ ಅತ್ಯಗತ್ಯವಿದೆ. ಶಿಕ್ಷಕರ ಫೇಸ್ ರಿಡಿಂಗ್ ಹಾಜರಾತಿ ಪ್ರಕ್ರಿಯೆಯಂತೆ ರಾಜ್ಯದಲ್ಲಿರುವ 57 ಲಕ್ಷ ಶಾಲಾ ಮಕ್ಕಳ ಫೇಸ್ ರಿಡಿಂಗ್ ಹಾಜರಾತಿಗೆ ಇನ್ನೊಂದು ತಿಂಗಳ ಒಳಗಾಗಿ ಪ್ರಕ್ರಿಯೆಗೆ ಅಧೀಕೃತ ಚಾಲನೆ ನೀಡಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಸಚಿವರು ಹೇಳಿದರು.

ತಂತ್ರಜ್ಞಾನ ಬಳಕೆ ಮಾಡಿಕೊಂಡು ರಾಜ್ಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಣ ಇಲಾಖೆ ಅಧಿಕಾರಿಗಳು ಮುಂದಾಗೋಣ ಎಂದು ಸಚಿವ ಎಸ್ ಮಧು ಬಂಗಾರಪ್ಪ ಅವರು ತಿಳಿಸಿದರು

ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಮಾತನಾಡಿ, ಆಯ್ಯವ್ಯಯ ಬಾಷಣದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿಕೆಯಂತೆ ರಾಜ್ಯದಲ್ಲಿ ಶಿಕ್ಷಕರು, ಇಲಾಖೆಯ ಸಿಬ್ಬಂದಿಳಿಗೆ ಆನ್ ಲೈನ್ ಹಾಜರಾತಿಗೆ ಇಂದು ಗದಗನಲ್ಲಿ ಚಾಲನೆ ನೀಡಲಾಗಿದೆ. ಕೊಟ್ಟಿ ಹಾಜರಾತಿಗೆ ಇನ್ಮುಂದೆ ಅವಕಾಶ ಇಲ್ಲ. ಇದು ರಾಜ್ಯದಲ್ಲೇ ಮೊದಲು ಗದಗನಲ್ಲಿ ಚಾಲನೆ ದೊರೆತಿದೆ ಎಂದು ನುಡಿದರು.

ಆನ್ ಲೈನ್ ಹಾಜರಾತಿಯು ಶಿಕ್ಷಕರು ಶಾಲಾ ಆವರಣದ ತಲುಪಿದ ನಂತರ ಶಿಕ್ಷಕರು ಮೊಬೈಲ್ ಆಪ್ ಮೂಲಕ ಹಾಕಬೇಕಾಗುತ್ತದೆ. ಮನೆಯಲ್ಲಿ ಕುಳಿತು ಹಾಜರಿ ಹಾಕುವ ಅವಕಾಶ ಇಲ್ಲ. ಇದರಿಂದ ಸಮಯಕ್ಕೆ ಸರಿಯಾಗಿ ಶಾಲೆಯಲ್ಲಿ ಶಿಕ್ಷಕರು ಇರುವಂತೆ ಪ್ರಕ್ರಿಯೆ ಆಗುತ್ತಿದೆ. ಇದರಿಂದ ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಶಿಕ್ಷಕರಿಗೆ ಕಾಲಾವಕಾಶ ಸಿಕ್ಕಂತಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಜಿಲ್ಲೆಯ ಒಟ್ಟು ಶಿಕ್ಷಕರು, ಸಿಬ್ಬಂದಿಗಳು ಸೇರಿ 4789 ಜನರು ಆನ್ ಲೈನ್ ಹಾಜರಾತಿ ನೋಂದಣಿ ಮಾಡಿಕೊಂಡಿದ್ದಾರೆ. ಜಿಲ್ಲೆಯ 715 ಶಾಲೆಗಳು, 14 ಕಚೇರಿಗಳು, 253 ಸಿಬ್ಬಂದಿಗಳು ಮತ್ತು ಶಿಕ್ಷಕರು ಸೇರಿ ಈಗಾಗಲೇ ನೋಂದಣಿ ಪ್ರಕ್ರಿಯೆ ಯಶಸ್ವಿ ಆಗಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲೂ ಈ ಪ್ರಕ್ರಿಯೆಗೆ ಚಾಲನೆ ಸಿಗಲಿದೆ ಎಂದು ಸಚಿವರು ತಿಳಿದರು.

ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರು, ಶಾಸಕ ಡಾ. ಚಂದ್ರು ಲಮಾಣಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ. ಅಸೂಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರ್ ಸಾಬ್ ಬಬರ್ಜಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿಪಂ ಸಿಇಒ ಭರತ ಎಸ್, ಶಿಕ್ಷಣ ಇಲಾಖೆ ಅಪರ ಆಯುಕ್ತೆ ಶ್ರೀಮತಿ ಸಿಂತ್ರಿ, ಡಿಡಿಪಿಐ ಆರ್. ಎಸ್. ಬುರಡಿ ಸೇರಿದಂತೆ ಇತರ ಅಧಿಕಾರಿಗಳು ಸಿಬ್ಬಂದಿ ಇದ್ದರು.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande