ಬೆಳೆ ವಿಮೆ ಪಾವತಿ ಅವಧಿ ವಿಸ್ತರಣೆ
ಶಿವಮೊಗ್ಗ, 10 ಆಗಸ್ಟ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ 2024-25 ನೇ ಸಾಲಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆಗಳಾದ ಅಡಿಕೆ, ಮಾವು, ಕಾಳುಮೆಣಸು, ಮತ್ತು ಶುಂಠಿ ಬೆಳೆಗಳಿಗೆ ಬೆಳೆ ವಿಮೆ ಯೋಜನೆಯಡಿ ವಿಮೆಯನ್ನು ಪಾವತಿಮಾಡಲು ಆಗಸ್ಟ್ 14 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ಬೆಳೆ ವಿಮೆ ಪಾವತಿ ಅವಧಿ ವಿಸ್ತರಣೆ


ಶಿವಮೊಗ್ಗ, 10 ಆಗಸ್ಟ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ 2024-25 ನೇ ಸಾಲಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆಗಳಾದ ಅಡಿಕೆ, ಮಾವು, ಕಾಳುಮೆಣಸು, ಮತ್ತು ಶುಂಠಿ ಬೆಳೆಗಳಿಗೆ ಬೆಳೆ ವಿಮೆ ಯೋಜನೆಯಡಿ ವಿಮೆಯನ್ನು ಪಾವತಿಮಾಡಲು ಆಗಸ್ಟ್ 14 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಈ ಬೆಳೆಗಳನ್ನು ಬೆಳೆದಿರುವ ರೈತರುಗಳು ಬೆಳೆ ವಿಮೆಯ ಪ್ರಯೋಜನವನ್ನು ಪಡೆಯಲು ಪ್ರತಿ ಎಕರೆಗೆ ಆಯಾ ಬೆಳೆಗಳಿಗೆ ನಿಗದಿ ಮಾಡಿರುವ ಹಣ ಪಾವತಿ ಮಾಡಿ ಇದರ ಸದುಪಯೋಗ ಪಡೆಯಬಹುದಾಗಿದ್ದು, ಅಡಿಕೆಗೆ ರೂ.2560/-, ಮಾವು ರೂ.3200/-, ಕಾಳುಮೆಣಸು ರೂ.1692/-, ಶುಂಠಿ ರೂ.2600/-, ರೈತರುಗಳು ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ (ಸಿ.ಎಸ್.ಸಿ. ಸೆಂಟರ್) ಗ್ರಾಮ ಒನ್, ಮತ್ತು ಬ್ಯಾಂಕ್‌ಗಳಲ್ಲಿ ವಿಮೆ ಕಂತನ್ನು ಪಾವತಿ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ತೋಟಗಾರಿಕೆ ಇಲಾಖೆ ಶಿಕಾರಿಪುರ ಹಾಗೂ ದೂ.ಸಂ.08187-223544 ಸಂಪರ್ಕಿಸಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande