ವಿಜಯಪುರ, 11 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು. ಶ್ರೀ ಕ್ಷೇತ್ರ ಮಾಹಾಕೂಟದ ಬೈರದೇವರ ದೇವಸ್ಥಾನದಲ್ಲಿ
ಬಾಗಲಕೋಟ ಬಿಜೆಪಿ ಜಿಲ್ಲಾ ಅಧ್ಯಕ್ಷ ಶಾಂತಗೌಡ ಪಾಟೀಲ ನೇತೃತ್ವದಲ್ಲಿ ಅಭಿಯಾನ ನಡೆಯಿತು.
ಬಿಜೆಪಿ ಕಾರ್ಯಕರ್ತರು ಶ್ರೀ ಕ್ಷೇತ್ರ ಮಾಹಾಕೂಟದ ಬೈರದೇವರ ದೇವಸ್ಥಾನ ಆವರಣದಲ್ಲಿನ ಗಿಡಕಂಟಿ, ಕಸವನ್ನು ತೆಗೆದು ಗುಡಿ ಸುತ್ತಮುತ್ತಲಿನ ವಾತಾವರಣವನ್ನು ಶುಚಿಗೊಳಿಸಿದರು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ನಾಗರಾಜ ಕಾಚಟ್ಟಿ ಅವರ
ಹಾಗೂ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande