ಕೊಪ್ಪಳ, 12 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಗಂಗಾವತಿ ಶಾಸಕರಾದ ಗಾಲಿ ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ತುಂಗಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಕಾಡಾ) ಅಧ್ಯಕ್ಷರಾದ ಹಸೇನ್ ಸಾಬ್ ನಬೀಸಾಬ್ ದೋಟಿಹಾಳ, ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ ಗುಪ್ತಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ.ಮೋಹನರಾಜ ಅವರು ಆಗಮಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಡಾ.ರಾಮ್ ಎಲ್ ಅರಸಿದ್ಧಿ ಅವರು ಉಪಸ್ಥಿತರಿರುವರು.
ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣದ ನಂತರ ಪೆÇಲೀಸ್ ಇಲಾಖೆ, ಅರಣ್ಯ ಇಲಾಖೆ, ಎನ್.ಸಿ.ಸಿ., ಎನ್.ಎಸ್.ಎಸ್., ಸ್ಕೌಟ್ಸ್ ಮತ್ತು ಗೈಡ್ಸ್ ಮುಂತಾದವರ ತಂಡದಿಂದ ಪಥಸಂಚಲನ, ಸಾಧಕರಿಗೆ ಸನ್ಮಾನ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕೊಪ್ಪಳ ಜಿಲ್ಲಾಡಳಿತದ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್