ಬಳ್ಳಾರಿ ಮಹಾನಗರ ಪಾಲಿಕೆ : ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಲು ಮನವಿ
ಬಳ್ಳಾರಿ, 12 ಆಗಸ್ಟ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸುವ ಮೂಲಕ ಪರಿ
ಬಳ್ಳಾರಿ ಮಹಾನಗರ ಪಾಲಿಕೆ : ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಲು ಮನವಿ


ಬಳ್ಳಾರಿ, 12 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸುವ ಮೂಲಕ ಪರಿಸರ ಸ್ನೇಹಿ ಹಬ್ಬ ಆಚರಿಸಬೇಕು ಎಂದು ಮಹಾನಗರ ಪಾಲಿಕೆಯು ತಿಳಿಸಿದೆ.

ಜಲಮಾಲಿನ್ಯ(ತಡೆ ಮತ್ತು ನಿಯಂತ್ರಣ)ಕಾಯ್ದೆ 1974ರ ಕಲಂ33(ಎ) ರನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದು ಕಾನೂನು ಬಾಹೀರವಾಗಿದೆ. ಕಾಯ್ದೆಯನ್ನು ಉಲ್ಲಂಘಿಸಿದಲ್ಲಿ ಜಲಮಾಲಿನ್ಯ(ತಡೆ ಮತ್ತು ನಿಯಂತ್ರಣ)ಕಾಯ್ದೆ 1974ರ ಕಲಂ45(ಎ)ರನ್ವಯ ರೂ.10,000/-ಗಳ ವರೆಗೆ ದಂಡ ವಿಧಿಸಬಹುದಾಗಿದ್ದು ಮತ್ತು ಜೈಲುವಾಸ ಸಹ ವಿಧಿಸಬಹುದಾಗಿದೆ.

ಹಾಗಾಗಿ ಬಳ್ಳಾರಿ ನಗರದ ನಾಗರಿಕರು, ಉದ್ದಿಮೆದಾರರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದನ್ನು ಕಂಡುಬಂದಲ್ಲಿ ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು.

ಪರಿಸರ ಸ್ನೇಹಿ ಮಣ್ಣಿನಿಂದ ಮಾಡಿದ ಗಣೇಶ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡಬೇಕು ಎಂದು ಪಾಲಿಕೆ ಕಚೇರಿಯು ಕೋರಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande