ಬಾಲಕಾರ್ಮಿಕ, ಕಿಶೋರ ಕಾರ್ಮಿಕ ಮಕ್ಕಳ ರಕ್ಷಣೆ
ಬಳ್ಳಾರಿ, 12 ಆಗಸ್ಟ್ (ಹಿ.ಸ.) : ಆ್ಯಂಕರ್ : ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್‍ಪೋರ್ಸ್ ಸಮಿತಿಯು ಹಲವೆಡೆ ದಾಳಿ ನಡೆಸಿ, 10 ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಟಾಸ್ಕ್‍ಪೋರ್ಸ್ ಸಮಿತಿಯ ಅಧಿಕಾರಿಗಳು ತಿಳಿಸಿದ್ದಾರೆ. ನಗರದ ಅನಂತಪುರ ರಸ್ತೆಯ ವಡ್ಡರಬಂ
ಬಾಲಕಾರ್ಮಿಕ, ಕಿಶೋರ ಕಾರ್ಮಿಕ ಮಕ್ಕಳ ರಕ್ಷಣೆ


ಬಳ್ಳಾರಿ, 12 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್‍ಪೋರ್ಸ್ ಸಮಿತಿಯು ಹಲವೆಡೆ ದಾಳಿ ನಡೆಸಿ, 10 ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಟಾಸ್ಕ್‍ಪೋರ್ಸ್ ಸಮಿತಿಯ ಅಧಿಕಾರಿಗಳು ತಿಳಿಸಿದ್ದಾರೆ.

ನಗರದ ಅನಂತಪುರ ರಸ್ತೆಯ ವಡ್ಡರಬಂಡೆ ಮತ್ತು ರೂಪನಗುಡಿ ರಸ್ತೆಯ ವಿವಿಧ ಸ್ಥಳಗಳಲ್ಲಿನ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಬೇಕರಿ ಇತ್ಯಾದಿ ಉದ್ದಿಮೆಗಳ ಮೇಲೆ ದಾಳಿ ನಡೆಸಲಾಗಿದ್ದು ಮಕ್ಕಳನ್ನು ರಕ್ಷಿಸಿ ಸ್ಥಳದಲ್ಲಿ ಮಕ್ಕಳ ಹೇಳಿಕೆಗಳನ್ನು ಪಡೆದುಕೊಂಡು ಅವರ ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ ಎಂದರು.

ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಕಾರ್ಮಿಕ ನಿರೀಕ್ಷಕ ರಮೇಶ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್, ಕ್ಷೇತ್ರ ಸಮನ್ವಯ ಅಧಿಕಾರಿ ಮಲ್ಲಪ್ಪ, ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಸೈಯದ್ ಬಾಷಾ, ಪೋಲಿಸ್ ಇಲಾಖೆಯ ಶೇಹನಾಜ್ ಮತ್ತು ಶಫೀಯುಲ್ಲಾ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಸುಶೀಲಾ, ರೀಚ್ ಸಂಸ್ಥೆಯ ಸಂಯೋಜಕಿ ಲಕ್ಷ್ಮೀದೇವಿ, ರೀಡ್ಸ್ ಸಂಸ್ಥೆಯ ಜ್ಞಾನೇಶ್ವರ ಹಾಗೂ ಇಲಾಖೆ ಅಧಿಕಾರಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande