ಆರ್ಯ ವೈಶ್ಯ ಸಮುದಾಯದವರಿಗೆ ಅರಿವು ಶೈಕ್ಷಣಿಕ ಸಾಲ : ಅರ್ಜಿ ಆಹ್ವಾನ
ಕೊಪ್ಪಳ, 13 ಆಗಸ್ಟ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಆರ್ಯ ವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ‘ಅರಿವು’ ಶೈಕ್ಷಣಿಕ ಸಾಲ ಯೋಜನೆಯಡಿ ಆರ್ಯ ವೈಶ್ಯ ಸಮುದಾಯದ ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿ.ಇ.ಟಿ., ಎ
ಆರ್ಯ ವೈಶ್ಯ ಸಮುದಾಯದವರಿಗೆ ಅರಿವು ಶೈಕ್ಷಣಿಕ ಸಾಲ : ಅರ್ಜಿ ಆಹ್ವಾನ


ಕೊಪ್ಪಳ, 13 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಆರ್ಯ ವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ‘ಅರಿವು’ ಶೈಕ್ಷಣಿಕ ಸಾಲ ಯೋಜನೆಯಡಿ ಆರ್ಯ ವೈಶ್ಯ ಸಮುದಾಯದ ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿ.ಇ.ಟಿ., ಎನ್.ಇ.ಇ.ಟಿ. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಎಮ್.ಬಿ.ಬಿ.ಎಸ್., ಬಿ.ಇ., ಬಿ.ಟೆಕ್., ಇತ್ಯಾದಿ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಗೆ ವರ್ಷಕ್ಕೆ ರೂ. 1 ಲಕ್ಷಗಳ ಶೈಕ್ಷಣಿಕ ಸಾಲವನ್ನು ಶೇಕಡಾ 2ರ ಬಡ್ಡಿದರದಲ್ಲಿ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ನೀಡಿ, ನಂತರ 36 ತಿಂಗಳ ಮಾಸಿಕ ಕಂತುಗಳಲ್ಲಿ ಈ ಸಾಲವನ್ನು ಮರುಪಾವತಿ ಮಾಡಬೇಕಾಗುತ್ತದೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆರ್ಯವೈಶ್ಯ ಸಮುದಾಯದವರಾಗಿರಬೇಕು. ವಯಸ್ಸು 18 ರಿಂದ 35 ವರ್ಷಗಳೊಳಗಿರಬೇಕು. ಗ್ರಾಮ ಹಾಗೂ ನಗರ ಪ್ರದೇಶ ಸೇರಿದಂತೆ ಕುಟುಂಬದ ವಾರ್ಷಿಕ ಆದಾಯವು ರೂ. 6 ಲಕ್ಷದ ಮಿತಿಯೊಳಗಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಜಾತಿ ಹಾಗೂ ಆದಾಯ ಪ್ರಮಾಣಪತ್ರ (ನಮೂನೆ-ಜೆ) ಮಾನ್ಯವಾಗಿರಬೇಕು. ಆಧಾರ್ ಸಂಖ್ಯೆ ಮೊಬೈಲ್ ಹಾಗೂ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು. ಮಹಿಳೆಯರಿಗೆ ಶೇ.33ರಷ್ಟು ಹಾಗೂ ವಿಕಲಚೇತನರಿಗೆ ಶೇ.5ರಷ್ಟು ಮೀಸಲಾತಿ ಇರಿಸಲಾಗಿದೆ. ಈ ಯೋಜನೆಯಡಿ ಒಂದು ಕುಟುಂಬದಿಂದ ಗರಿಷ್ಠ ಇಬ್ಬರಿಗೆ ಮಾತ್ರ ಸೌಲಭ್ಯ ನೀಡಲಾಗುವುದು.

ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆರ್ಯವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದ ಸಹಾಯವಾಣಿ 9448451111 ಗೆ ಬೆಳಿಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದು. ಅರ್ಜಿ ಸಲ್ಲಿಸುವ ಕುರಿತಂತೆ ಮಾರ್ಗಸೂಚಿ ಹಾಗೂ ವಿವರಗಳನ್ನು ನಿಗಮದ ವೆಬ್‍ಸೈಟ್ https://kacdc.karnataka.gov.in/ ಮೂಲಕ ಪಡೆಯಬಹುದಾಗಿದೆ ಎಂದು ಕರ್ನಾಟಕ ಆರ್ಯವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande