ವಿಜಯಪುರ, 13 ಆಗಸ್ಟ್ (ಹಿ.ಸ.) :
ಆ್ಯಂಕರ್ : ಭೂಮಿ ಕಳೆದುಕೊಂಡ ರೈತರ ಕುಟುಂಬಕ್ಕೆ ಉದ್ಯೋಗವಕಾಶದ ಲಿಖಿತ ಭರವಸೆ ನೀಡಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲೆಯ ಕೂಡಗಿ ಉಷ್ಟ ವಿದ್ಯುತ್ ಸ್ಥಾವರ ಎನ್ ಟಿ ಪಿ ಸಿ ಎದುರು ಪ್ರವಿಣ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು. ಎನ್ಟಿಪಿಸಿ ಕೆರೆಯಿಂದ ಸವಳ ಜವಳ ಆದ ಜಮೀನಿಗೆ ಶಾಶ್ವತ ಪರಿಹಾರ ನೀಡಬೇಕು. ಎನ್ಟಿಪಿಸಿಯ ಲಾಭಾಂಶದಲ್ಲಿ ಸಂತ್ರಸ್ತರಿಗೆ ಲಾಭ ಕೊಡಬೇಕು ಸೇರಿದಂತೆ 11 ನಾನಾ ಬೇಡಿಕೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande